Advertisement
ಸುದ್ದಿಗಳು

ಕಿದು ಕೃಷಿ ಸಂಶೋಧನಾ ಕೇಂದ್ರ ಉಳಿಸಲು ವಿದ್ಯಾಪ್ರಸನ್ನ ಶ್ರೀ ಒತ್ತಾಯ

Share

ಸುಬ್ರಹ್ಮಣ್ಯ : ಕಿದು ಕೃಷಿ ಸಂಶೋಧನಾ ಕೇಂದ್ರವನ್ನು ಅರಣ್ಯ ಇಲಾಖೆ ವಾಪಸ್ ಪಡೆಯದೆ ವಿನಾಯಿತಿ ನೀಡುವಂತೆ ಮತ್ತು ಇರುವ ನವೀಕರಣ ಸಮಸ್ಯೆ ಇತ್ಯರ್ಥ ಪಡಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಮನವಿ ಮಾಡುವೆ ಎಂದು  ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥಶ್ರೀಗಳು ಹೇಳಿದರು.

Advertisement
Advertisement

ಅರಣ್ಯ ಇಲಾಖೆಯಿಂದ ಭೂಮಿಯನ್ನು ಲೀಸಿಗೆ ಪಡೆದು ಕೃಷಿ ಸಂಶೋಧನೆಗಾಗಿ ಕಡಬ ತಾಲೂಕಿನ ಕಿದುವಿನಲ್ಲಿ ಸ್ಥಾಪನೆಯಾಗಿರುವ ಕಿದು ತೆಂಗು ಜಿನ್ ಬ್ಯಾಂಕನ್ನು ನವೀಕರಿಸದೆ ಇರುವುದು ಮತ್ತು ನವೀಕರಣ ಹಣ ಪಾವತಿಸದೆ ಕೃಷಿಕರಿಗೆ ಆಗುತ್ತಿರುವ ತೊಂದರೆ ಹಿನ್ನಲೆಯಲ್ಲಿ ಸಹಕಾರಿ ಧುರೀಣ ಬಾಲಕೃಷ್ಣ ವಾಲ್ತಾಜೆ ಮತ್ತಿತರ ಕೃಷಿ ಮುಖಂಡರ ನಿಯೋಗ ಶುಕ್ರವಾರ ಸುಬ್ರಹ್ಮಣ್ಯಕ್ಕೆ ಮಠಕ್ಕೆ ತೆರಳಿ ಯತಿಳನ್ನು ಬೇಟಿಯಾಗಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಿತು.

ಈ ವೇಳೆ ಯತಿಗಳು ಈ ಹಿಂದೆಯು ಇಂತಹದ್ದೆ ಸಮಸ್ಯೆ ಬಂದಿದ್ದಾಗ ತಾನು ಕೇಂದ್ರ ಹಾಗೂ ರಾಜ್ಯದ ಸಚಿವರಿಗೆ, ಸಂಸದರಿಗೆ ಮನವಿ ಮಾಡಿದ್ದೆ ಎಂದು ಹೇಳಿದರು. ಸ್ಥಳದಿಂದಲೇ ಅವರು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ  ಬಿ ಎಲ್ ಸಂತೋಷ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿದರು. ಕಿದು ಕೇಂದ್ರದ ಸಮಸ್ಯೆ ಇತ್ಯರ್ಥ ಪಡಿಸಿ ಶಾಶ್ವತ ಪರಿಹಾರ ಕ್ರಮಕ್ಕೆ ಸರಕಾರವೇ ಮುತುವರ್ಜಿ ವಹಿಸಿ ರೈತರ ಹಿತ ಕಾಯುವಂತೆ ಅವರಿಬ್ಬರಲ್ಲಿ ಶ್ರೀಗಳು ಮನವಿ ಮಾಡಿದರು. ಇದಕ್ಕೆ ಇಬ್ಬರು ಸಕರಾತ್ಮಕವಾಗಿ ಸ್ಪಂದಿಸಿ ಸೂಕ್ತ ಕ್ರಮದ ಭರವಸೆಯನ್ನು ಅವರು ಯತಿಗಳಿಗೆ ನೀಡಿದರು.

ಬಳಿಕ ಮಾತನಾಡಿದ ಶ್ರೀಗಳು ಜಿನ್ ಬ್ಯಾಂಕು ಸಮಸ್ಯೆ ಇತ್ಯರ್ಥಕ್ಕೆ ಕೇಂದ್ರ ಸರಕಾರದ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗಳನ್ನು ನೇರವಾಗಿ ಭೇಟಿಯಾಗಿ ಚರ್ಚಿಸುವೆ ಎಂದರು. ಇಲ್ಲಿನ ಅಂತರಾಷ್ಟ್ರೀಯ ಸಂಶೋಧನ ಕೇಂದ್ರದಿಂದ ದೇಶದ ಕೃಷಿಕರಿಗೆ ಬಹಳಷ್ಟು ಪ್ರಯೋಜನಕಾರಿ. ಕೃಷಿ ಪ್ರಧಾನವಾದ ಈ ಭಾಗದಲ್ಲಿ ಇರುವ ಏಕೈಕ ಕೇಂದ್ರವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಹೊಣೆಗಾರಿಕೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನು ನಡೆಸುವುದಾಗಿ ಅವರು ಭರವಸೆ ಇತ್ತರು. ಈ ವೇಳೆ ಕೃಷಿಕ ನಾಗೇಶ್ ಕೈಕಂಬ ಮತ್ತಿತರ ಕೃಷಿಕರು ಉಪಸ್ಥಿತರಿದ್ದರು.
ತೆಂಗು ಸಂಶೋಧನಾ ಕೇಂದ್ರ ಕ ತಪ್ಪುವುದಕ್ಕೆ ಅವಕಾಶ ನೀಡುವುದಿಲ್ಲ. ಈ ಹಿಂದೆ ತಾನು ಕೇಂದ್ರ ಕೃಷಿ ಸಚಿವರ ಜತೆ ಅಧಿಕಾರಿಗಳ ಸಮ್ಮುಖವೇ ಸಭೆ ನಡೆಸಿ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನ ನಡೆಸಿದ್ದೆ. ಬಳಿಕವೂ ನೊಟೀಸ್ ಜಾರಿಯಂತ ಸಮಸ್ಯೆ ಪುನಾರವರ್ತನೆ ಆಗುತ್ತಿದೆ. ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

6 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

7 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

7 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

7 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

7 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

7 hours ago