ಕಿದು ತೆಂಗು ಸಂಶೋಧನಾ ಕೇಂದ್ರಕ್ಕೆ ಸುಬ್ರಹ್ಮಣ್ಯ ಶ್ರೀ ಭೇಟಿ

June 28, 2019
10:17 PM

ಸುಬ್ರಹ್ಮಣ್ಯ: ಕಿದುವಿನ ಅಂತರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರ ಉಳಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಇಚ್ಚಾಶಕ್ತಿ ವ್ಯಕ್ತಪಡಿಸಬೇಕು ಎಂದು ಸುಬ್ರಹ್ಮಣ್ಯ   ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ  ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.

Advertisement
Advertisement

ಅವರು ಕಡಬ ತಾಲೂಕಿನ ಬಿಳಿನೆಲೆ ಕಿದು ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಶುಕ್ರವಾರ ಸಂಜೆ ತೆರಳಿ ತೋಟಗಳ ಬೆಳೆಗಳ ವೀಕ್ಷಣೆ ನಡೆಸಿದರು. ಸಂಶೋಧನಾ ಕೇಂದ್ರ ಉಳಿಸುವ ಮೂಲಕ ಕೃಷಿಕರ ಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳ ಪಾತ್ರ ಸಮಾನದ್ದಾಗಿದೆ. ರಾಜ್ಯದ ಎಲ್ಲಾ ಸಂಸದರು,  ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಈ ರಿಸರ್ಚ್ ಸೆಂಟರ್ ರಾಜ್ಯದಲ್ಲಿ ಉಳಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು.  ಕಿದು ಕೇಂದ್ರ ಉಳಿಸಲು ಸಂಬಂಧ ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ,  ಬಿಳಿನೆಲೆ ಸಹಕಾರಿ ಸಂಘದ ಅರ್ಧಯಕ್ಷ ಬಾಲಕೃಷ್ಣ ವಾಲ್ತಾಜೆ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾದಿನೇಶ್ ಗ್ರಾ.ಪಂ ಸದಸ್ಯ ಸತೀಶ್ ಕಳಿಗೆ, ಕೃಷಿಕ ಗಣಪಯ್ಯ ಗೌಡ ಪುತ್ತಿಲ, ಕೇಂದ್ರದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror