ಕಿದು ತೆಂಗು ಸಂಶೋಧನಾ ಕೇಂದ್ರಕ್ಕೆ ಸುಬ್ರಹ್ಮಣ್ಯ ಶ್ರೀ ಭೇಟಿ

June 28, 2019
10:17 PM

ಸುಬ್ರಹ್ಮಣ್ಯ: ಕಿದುವಿನ ಅಂತರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರ ಉಳಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಇಚ್ಚಾಶಕ್ತಿ ವ್ಯಕ್ತಪಡಿಸಬೇಕು ಎಂದು ಸುಬ್ರಹ್ಮಣ್ಯ   ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ  ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.

ಅವರು ಕಡಬ ತಾಲೂಕಿನ ಬಿಳಿನೆಲೆ ಕಿದು ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಶುಕ್ರವಾರ ಸಂಜೆ ತೆರಳಿ ತೋಟಗಳ ಬೆಳೆಗಳ ವೀಕ್ಷಣೆ ನಡೆಸಿದರು. ಸಂಶೋಧನಾ ಕೇಂದ್ರ ಉಳಿಸುವ ಮೂಲಕ ಕೃಷಿಕರ ಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳ ಪಾತ್ರ ಸಮಾನದ್ದಾಗಿದೆ. ರಾಜ್ಯದ ಎಲ್ಲಾ ಸಂಸದರು,  ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಈ ರಿಸರ್ಚ್ ಸೆಂಟರ್ ರಾಜ್ಯದಲ್ಲಿ ಉಳಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು.  ಕಿದು ಕೇಂದ್ರ ಉಳಿಸಲು ಸಂಬಂಧ ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ,  ಬಿಳಿನೆಲೆ ಸಹಕಾರಿ ಸಂಘದ ಅರ್ಧಯಕ್ಷ ಬಾಲಕೃಷ್ಣ ವಾಲ್ತಾಜೆ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾದಿನೇಶ್ ಗ್ರಾ.ಪಂ ಸದಸ್ಯ ಸತೀಶ್ ಕಳಿಗೆ, ಕೃಷಿಕ ಗಣಪಯ್ಯ ಗೌಡ ಪುತ್ತಿಲ, ಕೇಂದ್ರದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror