ಸುಬ್ರಹ್ಮಣ್ಯ: ಕಿದುವಿನ ಅಂತರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರ ಉಳಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಇಚ್ಚಾಶಕ್ತಿ ವ್ಯಕ್ತಪಡಿಸಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.
ಅವರು ಕಡಬ ತಾಲೂಕಿನ ಬಿಳಿನೆಲೆ ಕಿದು ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಶುಕ್ರವಾರ ಸಂಜೆ ತೆರಳಿ ತೋಟಗಳ ಬೆಳೆಗಳ ವೀಕ್ಷಣೆ ನಡೆಸಿದರು. ಸಂಶೋಧನಾ ಕೇಂದ್ರ ಉಳಿಸುವ ಮೂಲಕ ಕೃಷಿಕರ ಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳ ಪಾತ್ರ ಸಮಾನದ್ದಾಗಿದೆ. ರಾಜ್ಯದ ಎಲ್ಲಾ ಸಂಸದರು, ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಈ ರಿಸರ್ಚ್ ಸೆಂಟರ್ ರಾಜ್ಯದಲ್ಲಿ ಉಳಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು. ಕಿದು ಕೇಂದ್ರ ಉಳಿಸಲು ಸಂಬಂಧ ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ , ಬಿಳಿನೆಲೆ ಸಹಕಾರಿ ಸಂಘದ ಅರ್ಧಯಕ್ಷ ಬಾಲಕೃಷ್ಣ ವಾಲ್ತಾಜೆ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾದಿನೇಶ್ ಗ್ರಾ.ಪಂ ಸದಸ್ಯ ಸತೀಶ್ ಕಳಿಗೆ, ಕೃಷಿಕ ಗಣಪಯ್ಯ ಗೌಡ ಪುತ್ತಿಲ, ಕೇಂದ್ರದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…