ಸುಬ್ರಹ್ಮಣ್ಯ: ಕಿದುವಿನ ಅಂತರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರ ಉಳಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಇಚ್ಚಾಶಕ್ತಿ ವ್ಯಕ್ತಪಡಿಸಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.
ಅವರು ಕಡಬ ತಾಲೂಕಿನ ಬಿಳಿನೆಲೆ ಕಿದು ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಶುಕ್ರವಾರ ಸಂಜೆ ತೆರಳಿ ತೋಟಗಳ ಬೆಳೆಗಳ ವೀಕ್ಷಣೆ ನಡೆಸಿದರು. ಸಂಶೋಧನಾ ಕೇಂದ್ರ ಉಳಿಸುವ ಮೂಲಕ ಕೃಷಿಕರ ಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳ ಪಾತ್ರ ಸಮಾನದ್ದಾಗಿದೆ. ರಾಜ್ಯದ ಎಲ್ಲಾ ಸಂಸದರು, ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಈ ರಿಸರ್ಚ್ ಸೆಂಟರ್ ರಾಜ್ಯದಲ್ಲಿ ಉಳಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು. ಕಿದು ಕೇಂದ್ರ ಉಳಿಸಲು ಸಂಬಂಧ ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ , ಬಿಳಿನೆಲೆ ಸಹಕಾರಿ ಸಂಘದ ಅರ್ಧಯಕ್ಷ ಬಾಲಕೃಷ್ಣ ವಾಲ್ತಾಜೆ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾದಿನೇಶ್ ಗ್ರಾ.ಪಂ ಸದಸ್ಯ ಸತೀಶ್ ಕಳಿಗೆ, ಕೃಷಿಕ ಗಣಪಯ್ಯ ಗೌಡ ಪುತ್ತಿಲ, ಕೇಂದ್ರದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…