ಸುಬ್ರಹ್ಮಣ್ಯ: ಕಿದುವಿನ ಅಂತರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರ ಉಳಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಇಚ್ಚಾಶಕ್ತಿ ವ್ಯಕ್ತಪಡಿಸಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.
ಅವರು ಕಡಬ ತಾಲೂಕಿನ ಬಿಳಿನೆಲೆ ಕಿದು ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಶುಕ್ರವಾರ ಸಂಜೆ ತೆರಳಿ ತೋಟಗಳ ಬೆಳೆಗಳ ವೀಕ್ಷಣೆ ನಡೆಸಿದರು. ಸಂಶೋಧನಾ ಕೇಂದ್ರ ಉಳಿಸುವ ಮೂಲಕ ಕೃಷಿಕರ ಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳ ಪಾತ್ರ ಸಮಾನದ್ದಾಗಿದೆ. ರಾಜ್ಯದ ಎಲ್ಲಾ ಸಂಸದರು, ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಈ ರಿಸರ್ಚ್ ಸೆಂಟರ್ ರಾಜ್ಯದಲ್ಲಿ ಉಳಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು. ಕಿದು ಕೇಂದ್ರ ಉಳಿಸಲು ಸಂಬಂಧ ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ , ಬಿಳಿನೆಲೆ ಸಹಕಾರಿ ಸಂಘದ ಅರ್ಧಯಕ್ಷ ಬಾಲಕೃಷ್ಣ ವಾಲ್ತಾಜೆ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾದಿನೇಶ್ ಗ್ರಾ.ಪಂ ಸದಸ್ಯ ಸತೀಶ್ ಕಳಿಗೆ, ಕೃಷಿಕ ಗಣಪಯ್ಯ ಗೌಡ ಪುತ್ತಿಲ, ಕೇಂದ್ರದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…