ಸುಬ್ರಹ್ಮಣ್ಯ: ಕಿದುವಿನ ಅಂತರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರ ಉಳಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಇಚ್ಚಾಶಕ್ತಿ ವ್ಯಕ್ತಪಡಿಸಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.
ಅವರು ಕಡಬ ತಾಲೂಕಿನ ಬಿಳಿನೆಲೆ ಕಿದು ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಶುಕ್ರವಾರ ಸಂಜೆ ತೆರಳಿ ತೋಟಗಳ ಬೆಳೆಗಳ ವೀಕ್ಷಣೆ ನಡೆಸಿದರು. ಸಂಶೋಧನಾ ಕೇಂದ್ರ ಉಳಿಸುವ ಮೂಲಕ ಕೃಷಿಕರ ಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳ ಪಾತ್ರ ಸಮಾನದ್ದಾಗಿದೆ. ರಾಜ್ಯದ ಎಲ್ಲಾ ಸಂಸದರು, ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಈ ರಿಸರ್ಚ್ ಸೆಂಟರ್ ರಾಜ್ಯದಲ್ಲಿ ಉಳಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು. ಕಿದು ಕೇಂದ್ರ ಉಳಿಸಲು ಸಂಬಂಧ ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ , ಬಿಳಿನೆಲೆ ಸಹಕಾರಿ ಸಂಘದ ಅರ್ಧಯಕ್ಷ ಬಾಲಕೃಷ್ಣ ವಾಲ್ತಾಜೆ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾದಿನೇಶ್ ಗ್ರಾ.ಪಂ ಸದಸ್ಯ ಸತೀಶ್ ಕಳಿಗೆ, ಕೃಷಿಕ ಗಣಪಯ್ಯ ಗೌಡ ಪುತ್ತಿಲ, ಕೇಂದ್ರದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…