ಸುಬ್ರಹ್ಮಣ್ಯ: ಕಿದುವಿನ ಅಂತರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರ ಉಳಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಇಚ್ಚಾಶಕ್ತಿ ವ್ಯಕ್ತಪಡಿಸಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.
ಅವರು ಕಡಬ ತಾಲೂಕಿನ ಬಿಳಿನೆಲೆ ಕಿದು ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಶುಕ್ರವಾರ ಸಂಜೆ ತೆರಳಿ ತೋಟಗಳ ಬೆಳೆಗಳ ವೀಕ್ಷಣೆ ನಡೆಸಿದರು. ಸಂಶೋಧನಾ ಕೇಂದ್ರ ಉಳಿಸುವ ಮೂಲಕ ಕೃಷಿಕರ ಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳ ಪಾತ್ರ ಸಮಾನದ್ದಾಗಿದೆ. ರಾಜ್ಯದ ಎಲ್ಲಾ ಸಂಸದರು, ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಈ ರಿಸರ್ಚ್ ಸೆಂಟರ್ ರಾಜ್ಯದಲ್ಲಿ ಉಳಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು. ಕಿದು ಕೇಂದ್ರ ಉಳಿಸಲು ಸಂಬಂಧ ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ , ಬಿಳಿನೆಲೆ ಸಹಕಾರಿ ಸಂಘದ ಅರ್ಧಯಕ್ಷ ಬಾಲಕೃಷ್ಣ ವಾಲ್ತಾಜೆ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾದಿನೇಶ್ ಗ್ರಾ.ಪಂ ಸದಸ್ಯ ಸತೀಶ್ ಕಳಿಗೆ, ಕೃಷಿಕ ಗಣಪಯ್ಯ ಗೌಡ ಪುತ್ತಿಲ, ಕೇಂದ್ರದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…