MIRROR FOCUS

ಕಿದು ತೆಂಗು ಸಂಶೋಧನಾ ಕೇಂದ್ರಕ್ಕೆ ಮತ್ತೆ ಅರಣ್ಯ ಇಲಾಖೆಯಿಂದ ನೋಟೀಸ್..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೆಟ್ಟಣ : ಕಿದು ಸುರಕ್ಷಿತಾರಣ್ಯದಲ್ಲಿ ಸಂಶೋಧನಾ ಉದ್ದೇಶಕ್ಕಾಗಿ ಗೇಣಿ ನೆಲೆಯಲ್ಲಿ  ನೀಡಿದ 121 ಹೆಕ್ಟೇರ್ ಪ್ರದೇಶವನ್ನು ನವೀಕರಿಸಿ ಮೊತ್ತ ಪಾವತಿ ಮಾಡಬೇಕಿದ್ದು ಅದು ಪಾವತಿಯಾಗದ ಕಾರಣ ಈಗ ಒಟ್ಟು 19.26 ಕೋಟಿ ರೂಪಾಯಿಯನ್ನು 10 ದಿನಗಳೊಳಗಾಗಿ ಪಾವತಿ ಮಾಡದೇ ಇದ್ದರೆ ಭೂಮಿಯನ್ನು ಹಿಂಪಡೆಯಲು ಕ್ರಮ ಕೈಗೊಳ್ಳಲಾಗುವುದು…! ಈ ಅಂಶ ಒಳಗೊಂಡ ನೋಟೀಸ್ ಅರಣ್ಯ ಇಲಾಖೆ ನೆಟ್ಟಣದ ಕಿದು ಸಿ ಪಿ ಸಿ ಆರ್ ಐ ಕೇಂದ್ರದ ಕೇಂದ್ರ ಕಚೇರಿ ಕಾಸರಗೋಡಿಗೆ ನೀಡಿದೆ. ಈಗ ಮತ್ತೆ ಕೃಷಿಕರಿಗೇ ನಷ್ಟವಾಗುವ ಸೂಚನೆ ಇದೆ.

Advertisement
Advertisement

 

 

ಸುಮಾರು ಒಂದು ವರ್ಷದ ಹಿಂದೆ ಕಿದು ಕೇಂದ್ರೀಯ ತೋಟಗಾರಿಕೆ ಬೆಳೆಗಳ ಸಂಶೋಧನ ಕೇಂದ್ರ ಉಳಿಸಿ ಎಂದು ಕೃಷಿಕರು ಹೋರಾಟ ಮಾಡಿದ್ದರು. ಶಾಸಕರು, ಸಂಸದರು, ಕೇಂದ್ರ ಸಚಿವರು, ಉಸ್ತುವಾರಿ ಸಚಿವರೂ ಸೇರಿದಂತೆ ಎಲ್ಲರಿಗೂ ಮನವಿ ಮಾಡಿದ್ದರು. ಎಲ್ಲಾ ಜನಪ್ರತಿನಿಧಿಗಳೂ ಸೂಕ್ತವಾಗಿ ಸ್ಪಂದನೆ ಮಾಡಿದ್ದರು. ಕೇಂದ್ರ ಸಚಿವರ ಜೊತೆಗೂ ಮಾತನಾಡಿದ್ದರು. ಎಲ್ಲವೂ ಓಕೆ ಎಂದು ಕೃಷಿಕರು ನೆಮ್ಮದಿಯಿಂದ ಇದ್ದರು. ಇದೀಗ  ಮೇ ತಿಂಗಳಲ್ಲಿ  ತಯಾರಾದ ನೋಟೀಸ್ ಈಗ ಮತ್ತೆ ಸಿ ಪಿ ಸಿ ಆರ್ ಐ ತಲಪಿದೆ. ಹೀಗಾಗಿ ಮತ್ತೆ ಕೃಷಿಕರು ಎಚ್ಚೆತ್ತುಕೊಳ್ಳಬೇಕಾಗಿದೆ. ಸಿ ಪಿ ಸಿ ಆರ್ ಐ ಅಧಿಕಾರಿಗಳು ಏಕೆ ಈ ಬಗ್ಗೆ ಆಸಕ್ತಿ ತೆಗೆದುಕೊಳ್ಳುತ್ತಿಲ್ಲ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ಲೀಸ್‌ ಅವಧಿ 2000ನೇ ಇಸವಿಗೆ ಮುಗಿದಿದ್ದರೂ ನವೀಕರಣಕ್ಕೆ ಅಧಿಕಾರಿಗಳು ಉತ್ಸಾಹ ತೋರಿಲ್ಲ. ಆದರೆ ಈ ಹಿಂದೆ ಕೃಷಿಕರು ಕಿದು ಉಳಿಸಿ ಎಂಬ ಹೋರಾಟ ಆರಂಭ ಮಾಡಿದಾಗ ಆಗ ಇದ್ದ ನಿರ್ದೇಶಕ ಚೌಡಪ್ಪ ಅವರು ಕೃಷಿ ಮೇಳವನ್ನು ಕಿದುವಿನಲ್ಲಿ ಮಾಡಿದ್ದರು. ಇದಕ್ಕೆ ಸಚಿವ ಡಿ.ವಿ.ಸದಾನಂದ ಗೌಡ ಅವರೂ ಬಂದಿದ್ದರು. ಕಿದು ಉಳಿಸುವುದಾಗಿ ಭರವಸೆಯನ್ನೂ ನೀಡಿದ್ದರು. ಅದಾದ ಬಳಿಕ ಅಧಿಕಾರಿಗಳ ಫಾಲೋಅಪ್ ಕಾರಣದಿಂದ ಪ್ರಕ್ರಿಯೆ ತಡವಾಯಿತೇ ಎಂಬ ಪ್ರಶ್ನೆಯೂ ಇದೆ. ಈ ಹಿಂದೆಯೇ ಕಿದು ಸಿಪಿಸಿಆರ್‌ಐ ಕೇಂದ್ರ ಪ್ರಾದೇಶಿಕ ಕೇಂದ್ರವಾಗಿ ಮೇಲ್ದರ್ಜೆಗೇರುವ ಎಲ್ಲ ಅರ್ಹತೆಗಳನ್ನು ಹೊಂದಿದ್ದರೂ ಉನ್ನತ ಮಟ್ಟ ಅಧಿಕಾರಿಗಳ ಅಸಡ್ಡೆಯಿಂದ ಅದು ಮುಚ್ಚುವ ಹಂತಕ್ಕೆ ತಲುಪಿದೆ ಎಂದು ಕೃಷಿಕರು ದೂರಿದ್ದರು. ಈಗ ಅದಕ್ಕೆ ಈ ಅಂಶವೂ ಪುಷ್ಟಿ ನೀಡಿದೆ. ಏಕೆಂದರೆ ಕಿದು ಕೇಂದ್ರದಲ್ಲಿ  30 ಸಿಬಂದಿ ಮಾತ್ರವೇ ಇದ್ದಾರೆ. ನಿವೃತ್ತರಾದ ಅಧಿಕಾರಿಗಳ ಹುದ್ದೆಗಳಿಗೆ ಮರುನೇಮಕ ಆಗಿಲ್ಲ. ಕಾಸರಗೋಡು ಸಿಪಿಸಿಆರ್‌ಐನಲ್ಲಿ 60 ವಿಜ್ಞಾನಿಗಳಿದ್ದಾರೆ. ಇಲ್ಲಿಗೆ ಮಾತ್ರಾ ನೇಮಕ ಮಾಡದೇ ಇರುವುದೂ ಅದೇ ಉದ್ದೇಶವೇ ಎಂಬ ಸಂದೇಹ ಇದೆ.

Advertisement

1972 ರಲ್ಲಿ ಸ್ಥಾಪಿತವಾದ ಕಿದು ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ನ ಸಂಶೋಧನಾ ಕೇಂದ್ರವು ವಿಶ್ವದಲ್ಲೇ ಅತಿದೊಡ್ಡ ತೆಂಗು ಆನುವಂಶಿಕ ಸಂಪನ್ಮೂಲ ಕೇಂದ್ರವಾಗಿದೆ . ವಿಶ್ವದ ಕೆಲವೇ ಕೆಲವು  ತೆಂಗು ವಂಶಾಭಿವೃದ್ಧಿ ಬ್ಯಾಂಕ್‌ ಗಳಲ್ಲಿ ಒಂದಾಗಿರುವ ಕಿದು ಕೇಂದ್ರೀಯ ತೋಟಗಾರಿಕೆ ಬೆಳೆಗಳ ಸಂಶೋಧನ ಕೇಂದ್ರ ರಾಜ್ಯದಲ್ಲಿ ಇರುವುದು  ಇನ್ನೊಂದು ಹೆಮ್ಮೆ. ಕೆಲವು ವರ್ಷದ ಹಿಂದೆ ಇದೇ ಕೇಂದ್ರಕ್ಕೆ ವಿದೇಶದ ತಂಡವೂ ಭೇಟಿ ನೀಡಿತ್ತು. ಇಲ್ಲಿ  ವಾರ್ಷಿಕ 1.2 ಕೋಟಿ ರೂ. ಲಾಭಗಳಿಸುತ್ತಿದ್ದು  ಈಗ  ಇರುವ  ಭೂಮಿಯನ್ನು ಅರಣ್ಯ ಇಲಾಖೆಯಿಂದ 30 ವರ್ಷಗಳ ಅವಧಿಗೆ ಲೀಸ್‌ಗೆ ಪಡೆದು, ಅಡಿಕೆ, ತೆಂಗು ಮತ್ತು ಕೊಕ್ಕೋ ಗಿಡ ಬೆಳೆಸಿ, ಸಂಶೋಧನೆ ಮಾಡಲಾಗುತ್ತಿದೆ. ಸಂಶೋಧನಾ ಕೇಂದ್ರವು ಕಳೆದ ಐದು ವರ್ಷಗಳಲ್ಲಿ ತೆಂಗು, ಅಡಿಕೆ ಮತ್ತು ಕೊಕೊಗಳ ಸುಮಾರು 25 ಲಕ್ಷ ಬೀಜ ಬೀಜಗಳು , ಸುಧಾರಿತ ಪ್ರಭೇದಗಳು ಮತ್ತು ಪೋಷಕ ರೇಖೆಗಳ ಗುಣಮಟ್ಟದ ಗಿಡಗಳನ್ನು ಉತ್ಪಾದಿಸಿದೆ.

ಕಳೆದ ವರ್ಷವೇ ಮನವಿ :

ಕಾಸರಗೋಡು ಸಿ.ಪಿ.ಸಿ.ಆರ್.ಐ ಮತ್ತು ಸಿ.ಪಿ.ಸಿ.ಆರ್.ಐ ರಿಸರ್ಚ್ ಸೆಂಟರ್ ಕಿದು ಗುತ್ತಿಗೆ ಒಪ್ಪಂದವನ್ನು ನವೀಕರಿಸಲು ಕಳೆದ ವರ್ಷ ಕೇಂದ್ರ ಸಚಿವ ಸದಾನಂದ ಗೌಡ ಸಂಸದ  ನಳಿನ್ ಕುಮಾರ್ ಕಟೀಲ್ ಮತ್ತು  ಕಾಸರಗೋಡು ಸಿ.ಪಿ.ಸಿ.ಆರ್.ಐನ ಆಗಿನ  ನಿರ್ದೇಶಕ ಡಾ.ಪಿ.ಚೌಡಪ್ಪ ಅವರೊಂದಿಗೆ ಅಂದಿನ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಾದ ಡಾ. ಹರ್ಷವರ್ಧನ್ ಅವರನ್ನು ಭೇಟಿ ಮಾಡಿ ಕಾಸರಗೋಡು ಸಿ.ಪಿ.ಸಿ.ಆರ್.ಐ ಮತ್ತು ಸಿ.ಪಿ.ಸಿ.ಆರ್.ಐ ರಿಸರ್ಚ್ ಸೆಂಟರ್ ಕಿದು ವನ್ನು ಪ್ರಸ್ತುತ ಮೌಲ್ಯವನ್ನು ಬಿಟ್ಟು ಈಗಿರುವ ಗುತ್ತಿಗೆ ಒಪ್ಪಂದವನ್ನು ನವೀಕರಿಸುವ ಮೂಲಕ ಹಾಲಿ ಸ್ಥಳದಲ್ಲೇ ಉಳಿಸಿಕೊಳ್ಳಲು ಒತ್ತುನೀಡುವಂತೆ ಮಾನ್ಯ ಕೇಂದ್ರ ಸಚಿವರನ್ನು ಕೋರಿದ್ದರು, ಇದಕ್ಕೆ ಸಚಿವರು ಸ್ಪಂದಿಸಿದ್ದರು ಕೂಡಾ. ಇದೀಗ ಮತ್ತೆ ಅರಣ್ಯ ಇಲಾಖೆ ನೋಟೀಸ್ ಮಾಡಿದೆ. ಹೀಗಾಗಿ ಮತ್ತೆ ಚರ್ಚೆಗೆ ಕಾರಣವಾಗಿದೆ.

 

 

Advertisement

 

 

 

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

4 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

5 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

8 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

8 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

9 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago