Advertisement
ಸುದ್ದಿಗಳು

‘ಕಿನಾದಿ’ ಬ್ಯಾರಿ ಗಝಲ್ ಸಿಡಿ ಬಿಡುಗಡೆ

Share

ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಪೆರ್ನಾಲ್ ಸಂದೋಲ’ ಮತ್ತು ‘ಕಿನಾದಿ’ ಬ್ಯಾರಿ ಗಝಲ್ ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಅಕಾಡೆಮಿಗಳ ಅನುದಾನವನ್ನು 70 ಲಕ್ಷ ರೂ.ನಿಂದ ಒಂದು ಕೋಟಿ ರೂ.ಗೆ ಹೆಚ್ಚಿಸಲು ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಮುಂದಿನ ಬಜೆಟ್ನಲ್ಲಿ ಘೋಷಣೆ ನಿರೀಕ್ಷೆ ಇದೆ ಎಂದು  ಹೇಳಿದರು. ಒಂದು   ಕಾಲದಲ್ಲಿ ಬ್ಯಾರಿ ಕ್ಯಾಸೆಟ್ ಬಿಡುಗಡೆ ಮಾಡಲು ಹಣವೂ ಇಲ್ಲದೆ, ಜಾಗವೂ ಇಲ್ಲದೆ ಕಷ್ಟಪಡುವ ಪರಿಸ್ಥಿತಿ ಇತ್ತು. ನಂತರ ಬ್ಯಾರಿ ಸಾಹಿತ್ಯ ಪರಿಷತ್ ಮತ್ತಿತರ ಸಂಘಟನೆಗಳ ಮೂಲಕ ಸುಧಾರಣೆ ಆಯಿತು. ಈಗ ಅಕಾಡೆಮಿ ನೇತೃತ್ವದಲ್ಲಿ ಹಲವು ಅತ್ಯುತ್ತಮ ಕಾರ್ಯಕ್ರಮ ಆಗುತ್ತಿವೆ. ಬ್ಯಾರಿ ಗಝಲ್ ಮೂಲಕ ಬ್ಯಾರಿ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಮೈಲುಗಲ್ಲು ತಲುಪಿದಂತಾಗಿದೆ. ಸಂಗೀತಕ್ಕೆ ಜಾತಿ, ಧರ್ಮದ ಹಂಗಿಲ್ಲ. ಕೊಡುಕೊಳ್ಳುವಿಕೆ ಮೂಲಕ ಸಾಹಿತ್ಯ ಕ್ಷೇತ್ರ ವಿಸ್ತಾರಗೊಳ್ಳಬೇಕು ಎಂದು ಸಚಿವರು ಹೇಳಿದರು.

ಬ್ಯಾರಿ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮದ್ ಅಧ್ಯಕ್ಷತೆ ವಹಿಸಿ, ಒಂದೂವರೆ ವರ್ಷದಲ್ಲಿ ಅಕಾಡೆಮಿ ಗುಣಮಟ್ಟದ ಕಾರ್ಯಕ್ರಮಗಳನ್ನು ನೀಡಿದೆ. ಇಂದು ಗಝಲ್ ಸಿಡಿ ಬಿಡುಗಡೆ ಮಾಡಿದ್ದು, ಇನ್ನೊಂದು ಮಹತ್ವದ ಯೋಜನೆಯಾಗಿ ಬ್ಯಾರಿ ವ್ಯಾಕರಣ ಗ್ರಂಥ ಶೀಘ್ರ ಬಿಡುಗಡೆ ಮಾಡಲಿದೆ ಎಂದರು.

ಕೆನರಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಪಿ.ಬಿ.ಅಬ್ದುಲ್ ಹಮೀದ್, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ಜಗದೀಶ್ ಶೆಟ್ಟಿ, ಬಂಟ್ವಾಳ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಅಬ್ಬಾಸ್ ಅಲಿ, ಗಾಯಕ ಮುಹಮ್ಮದ್ ಹನೀಫ್ ಉಪ್ಪಳ ಶುಭ ಹಾರೈಸಿದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ., ಗಾಯಕ ಠಾಗೂರ್ ದಾಸ್ ಉಪಸ್ಥಿತರಿದ್ದರು.

ಸಿಡಿ ನಿರ್ಮಾಣದ ಕಲಾವಿದರಾದ ಮುಹಮ್ಮದ್ ಬಡ್ಡೂರು, ಠಾಗೂರ್ ದಾಸ್, ಪದ್ಮಿನಿ ನಾಯಕ್, ಸುಹೈಲ್ ಬಡ್ಡೂರ್, ಪುರುಷೋತ್ತಮ್ ಕೊಪ್ಪಲ್, ಶಿನೋಯ್ ವಿ.ಜೋಸೆಫ್ ಮತ್ತಿತರರನ್ನು ಸನ್ಮಾನಿಸಲಾಯಿತು.

ಬ್ಯಾರಿ ಅಕಾಡೆಮಿ ಸದಸ್ಯ ಬಶೀರ್ ಬೈಕಂಪಾಡಿ ಸ್ವಾಗತಿಸಿದರು. ಬಹುಭಾಷಾ ಸಾಹಿತಿ ಮುಹಮ್ಮದ್ ಬಡ್ಡೂರು ಪ್ರಾಸ್ತಾವಿಕ ಮಾತನಾಡಿದರು. ಸದಸ್ಯ ಮುಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಹುಸೈನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಠಾಗೂರ್ ದಾಸ್ ಅವರಿಂದ ಬ್ಯಾರಿ ಗಝಲ್ ಕಾರ್ಯಕ್ರಮ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

5 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

5 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago