Advertisement
ಅಪರಾಧ

ಕುಂಬ್ರದಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

Share

ಪುತ್ತೂರು: ಮಾಣಿ- ಮೈಸೂರು  ಹೆದ್ದಾರಿಯ ಶೇಖಮಲೆ ತಿರುವಿನಲ್ಲಿ ಸೋಮವಾರ   ಓವರ್‍ಟೇಕ್ ಮಾಡುವ ಭರಾಟೆಯಲ್ಲಿ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

Advertisement
Advertisement

ಸುಳ್ಯ ಕಡೆಯಿಂದ ಬರುತ್ತಿದ್ದ ಜಿಪ್ಸಿ- ಬೈಕ್ ಹಾಗೂ ಪುತ್ತೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ಖಾಸಗಿ ಬಸ್ಸು  ನಡುವೆ ಅಪಘಾತ ಸಂಭವಿಸಿದೆ. ರಸ್ತೆಯ ತಿರುವು ಅಪಾಯಕಾರಿಯಾಗಿದ್ದು ಈ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುತ್ತಿದ್ದ ವಾಹನ ಓವರ್‍ಟೇಕ್ ಮಾಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಭಾರೀ ಅಪಘಾತವನ್ನು ತಪ್ಪಿಸುವ ಉದ್ದೇಶದಲ್ಲಿ ಬಸ್ಸು ಚಾಲಕ ಬಸ್ಸನ್ನು ರಸ್ತೆಯ ಬದಿಯ ಇಳಿಜಾರಿಗೆ ಚಲಾಯಿಸಿದ್ದಾರೆ. ಅಪಘಾತದಿಂದ ಜಿಪ್ಸಿಯಲ್ಲಿದ್ದ  ಮಹಿಳೆ ಮತ್ತು ಬೈಕ್ ಸಹಸವಾರೆ ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ ಸವಿತಾರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿರುವ ಮಹಿಳೆಯೋರ್ವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಪ್ಸ್ ಅಳವಡಿಸಲು ಒತ್ತಾಯ:

ಶೇಖಮಲೆಯ ಈ ತಿರುವ ಅಪಾಯಕಾರಿಯಾಗಿದ್ದು ಈ ಹಿಂದೆಯೂ ಹಲವು ಬಾರಿ ಅಪಘಾತಗಳು ಸಂಭವಿಸಿದೆ. ಕುಂಬ್ರ ಕಡೆಯಿಂದ ತೆರಳುವ ವಾಹನಗಳಿಗೆ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುವ ವಾಹನಗಳು ಕಾಣದೆ ಇರುವುದು ಅಪಘಾತಕ್ಕೆ ಕಾರಣವಾಗುತ್ತಿದೆ. ರಸ್ತೆ ಅಗಲವಾಗಿರುವ ಕಾರಣ ವಾಹನಗಳನ್ನು ಅತೀ ವೇಗದಿಂದ ಚಲಾಯಿಸುವ ಕಾರಣ ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ಅಪಘಾತಗಳು ಸಂಭವಿಸುತ್ತಿದೆ. ವೇಗ ನಿಯಂತ್ರಣಕ್ಕೆ ಎರಡೂ ಕಡೆಗಳಲ್ಲಿ ಹಂಪ್ಸ್ ಅಳವಡಿಸಬೇಕೆಂದು ವಾಹನ ಚಾಲಕರು ಒತ್ತಾಯಿಸಿದ್ದಾರೆ. ಹಂಪ್ಸ್ ಹಾಕಲು ಸಾಧ್ಯವಿಲ್ಲದೇ ಇದ್ದಲ್ಲಿ ಬ್ಯಾರಿಕೇಡ್ ಅಳವಡಿಸಿ ಅಪಘಾತವನ್ನು ನಿಯಂತ್ರಿಸುವಂತೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

7 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

7 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

7 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

7 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

7 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

7 hours ago