Advertisement
ಅಪರಾಧ

ಕುಂಬ್ರದಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

Share

ಪುತ್ತೂರು: ಮಾಣಿ- ಮೈಸೂರು  ಹೆದ್ದಾರಿಯ ಶೇಖಮಲೆ ತಿರುವಿನಲ್ಲಿ ಸೋಮವಾರ   ಓವರ್‍ಟೇಕ್ ಮಾಡುವ ಭರಾಟೆಯಲ್ಲಿ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಸುಳ್ಯ ಕಡೆಯಿಂದ ಬರುತ್ತಿದ್ದ ಜಿಪ್ಸಿ- ಬೈಕ್ ಹಾಗೂ ಪುತ್ತೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ಖಾಸಗಿ ಬಸ್ಸು  ನಡುವೆ ಅಪಘಾತ ಸಂಭವಿಸಿದೆ. ರಸ್ತೆಯ ತಿರುವು ಅಪಾಯಕಾರಿಯಾಗಿದ್ದು ಈ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುತ್ತಿದ್ದ ವಾಹನ ಓವರ್‍ಟೇಕ್ ಮಾಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಭಾರೀ ಅಪಘಾತವನ್ನು ತಪ್ಪಿಸುವ ಉದ್ದೇಶದಲ್ಲಿ ಬಸ್ಸು ಚಾಲಕ ಬಸ್ಸನ್ನು ರಸ್ತೆಯ ಬದಿಯ ಇಳಿಜಾರಿಗೆ ಚಲಾಯಿಸಿದ್ದಾರೆ. ಅಪಘಾತದಿಂದ ಜಿಪ್ಸಿಯಲ್ಲಿದ್ದ  ಮಹಿಳೆ ಮತ್ತು ಬೈಕ್ ಸಹಸವಾರೆ ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ ಸವಿತಾರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿರುವ ಮಹಿಳೆಯೋರ್ವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಪ್ಸ್ ಅಳವಡಿಸಲು ಒತ್ತಾಯ:

ಶೇಖಮಲೆಯ ಈ ತಿರುವ ಅಪಾಯಕಾರಿಯಾಗಿದ್ದು ಈ ಹಿಂದೆಯೂ ಹಲವು ಬಾರಿ ಅಪಘಾತಗಳು ಸಂಭವಿಸಿದೆ. ಕುಂಬ್ರ ಕಡೆಯಿಂದ ತೆರಳುವ ವಾಹನಗಳಿಗೆ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುವ ವಾಹನಗಳು ಕಾಣದೆ ಇರುವುದು ಅಪಘಾತಕ್ಕೆ ಕಾರಣವಾಗುತ್ತಿದೆ. ರಸ್ತೆ ಅಗಲವಾಗಿರುವ ಕಾರಣ ವಾಹನಗಳನ್ನು ಅತೀ ವೇಗದಿಂದ ಚಲಾಯಿಸುವ ಕಾರಣ ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ಅಪಘಾತಗಳು ಸಂಭವಿಸುತ್ತಿದೆ. ವೇಗ ನಿಯಂತ್ರಣಕ್ಕೆ ಎರಡೂ ಕಡೆಗಳಲ್ಲಿ ಹಂಪ್ಸ್ ಅಳವಡಿಸಬೇಕೆಂದು ವಾಹನ ಚಾಲಕರು ಒತ್ತಾಯಿಸಿದ್ದಾರೆ. ಹಂಪ್ಸ್ ಹಾಕಲು ಸಾಧ್ಯವಿಲ್ಲದೇ ಇದ್ದಲ್ಲಿ ಬ್ಯಾರಿಕೇಡ್ ಅಳವಡಿಸಿ ಅಪಘಾತವನ್ನು ನಿಯಂತ್ರಿಸುವಂತೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

14 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

17 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

20 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago