Advertisement
ಅಪರಾಧ

ಕುಂಬ್ರದಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

Share

ಪುತ್ತೂರು: ಮಾಣಿ- ಮೈಸೂರು  ಹೆದ್ದಾರಿಯ ಶೇಖಮಲೆ ತಿರುವಿನಲ್ಲಿ ಸೋಮವಾರ   ಓವರ್‍ಟೇಕ್ ಮಾಡುವ ಭರಾಟೆಯಲ್ಲಿ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

Advertisement
Advertisement

ಸುಳ್ಯ ಕಡೆಯಿಂದ ಬರುತ್ತಿದ್ದ ಜಿಪ್ಸಿ- ಬೈಕ್ ಹಾಗೂ ಪುತ್ತೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ಖಾಸಗಿ ಬಸ್ಸು  ನಡುವೆ ಅಪಘಾತ ಸಂಭವಿಸಿದೆ. ರಸ್ತೆಯ ತಿರುವು ಅಪಾಯಕಾರಿಯಾಗಿದ್ದು ಈ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುತ್ತಿದ್ದ ವಾಹನ ಓವರ್‍ಟೇಕ್ ಮಾಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಭಾರೀ ಅಪಘಾತವನ್ನು ತಪ್ಪಿಸುವ ಉದ್ದೇಶದಲ್ಲಿ ಬಸ್ಸು ಚಾಲಕ ಬಸ್ಸನ್ನು ರಸ್ತೆಯ ಬದಿಯ ಇಳಿಜಾರಿಗೆ ಚಲಾಯಿಸಿದ್ದಾರೆ. ಅಪಘಾತದಿಂದ ಜಿಪ್ಸಿಯಲ್ಲಿದ್ದ  ಮಹಿಳೆ ಮತ್ತು ಬೈಕ್ ಸಹಸವಾರೆ ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ ಸವಿತಾರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿರುವ ಮಹಿಳೆಯೋರ್ವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಹಂಪ್ಸ್ ಅಳವಡಿಸಲು ಒತ್ತಾಯ:

ಶೇಖಮಲೆಯ ಈ ತಿರುವ ಅಪಾಯಕಾರಿಯಾಗಿದ್ದು ಈ ಹಿಂದೆಯೂ ಹಲವು ಬಾರಿ ಅಪಘಾತಗಳು ಸಂಭವಿಸಿದೆ. ಕುಂಬ್ರ ಕಡೆಯಿಂದ ತೆರಳುವ ವಾಹನಗಳಿಗೆ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುವ ವಾಹನಗಳು ಕಾಣದೆ ಇರುವುದು ಅಪಘಾತಕ್ಕೆ ಕಾರಣವಾಗುತ್ತಿದೆ. ರಸ್ತೆ ಅಗಲವಾಗಿರುವ ಕಾರಣ ವಾಹನಗಳನ್ನು ಅತೀ ವೇಗದಿಂದ ಚಲಾಯಿಸುವ ಕಾರಣ ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ಅಪಘಾತಗಳು ಸಂಭವಿಸುತ್ತಿದೆ. ವೇಗ ನಿಯಂತ್ರಣಕ್ಕೆ ಎರಡೂ ಕಡೆಗಳಲ್ಲಿ ಹಂಪ್ಸ್ ಅಳವಡಿಸಬೇಕೆಂದು ವಾಹನ ಚಾಲಕರು ಒತ್ತಾಯಿಸಿದ್ದಾರೆ. ಹಂಪ್ಸ್ ಹಾಕಲು ಸಾಧ್ಯವಿಲ್ಲದೇ ಇದ್ದಲ್ಲಿ ಬ್ಯಾರಿಕೇಡ್ ಅಳವಡಿಸಿ ಅಪಘಾತವನ್ನು ನಿಯಂತ್ರಿಸುವಂತೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

10 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago