Advertisement
ಅಪರಾಧ

ಕುಂಬ್ರದಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

Share

ಪುತ್ತೂರು: ಮಾಣಿ- ಮೈಸೂರು  ಹೆದ್ದಾರಿಯ ಶೇಖಮಲೆ ತಿರುವಿನಲ್ಲಿ ಸೋಮವಾರ   ಓವರ್‍ಟೇಕ್ ಮಾಡುವ ಭರಾಟೆಯಲ್ಲಿ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಸುಳ್ಯ ಕಡೆಯಿಂದ ಬರುತ್ತಿದ್ದ ಜಿಪ್ಸಿ- ಬೈಕ್ ಹಾಗೂ ಪುತ್ತೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ಖಾಸಗಿ ಬಸ್ಸು  ನಡುವೆ ಅಪಘಾತ ಸಂಭವಿಸಿದೆ. ರಸ್ತೆಯ ತಿರುವು ಅಪಾಯಕಾರಿಯಾಗಿದ್ದು ಈ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುತ್ತಿದ್ದ ವಾಹನ ಓವರ್‍ಟೇಕ್ ಮಾಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಭಾರೀ ಅಪಘಾತವನ್ನು ತಪ್ಪಿಸುವ ಉದ್ದೇಶದಲ್ಲಿ ಬಸ್ಸು ಚಾಲಕ ಬಸ್ಸನ್ನು ರಸ್ತೆಯ ಬದಿಯ ಇಳಿಜಾರಿಗೆ ಚಲಾಯಿಸಿದ್ದಾರೆ. ಅಪಘಾತದಿಂದ ಜಿಪ್ಸಿಯಲ್ಲಿದ್ದ  ಮಹಿಳೆ ಮತ್ತು ಬೈಕ್ ಸಹಸವಾರೆ ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ ಸವಿತಾರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿರುವ ಮಹಿಳೆಯೋರ್ವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಪ್ಸ್ ಅಳವಡಿಸಲು ಒತ್ತಾಯ:

ಶೇಖಮಲೆಯ ಈ ತಿರುವ ಅಪಾಯಕಾರಿಯಾಗಿದ್ದು ಈ ಹಿಂದೆಯೂ ಹಲವು ಬಾರಿ ಅಪಘಾತಗಳು ಸಂಭವಿಸಿದೆ. ಕುಂಬ್ರ ಕಡೆಯಿಂದ ತೆರಳುವ ವಾಹನಗಳಿಗೆ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುವ ವಾಹನಗಳು ಕಾಣದೆ ಇರುವುದು ಅಪಘಾತಕ್ಕೆ ಕಾರಣವಾಗುತ್ತಿದೆ. ರಸ್ತೆ ಅಗಲವಾಗಿರುವ ಕಾರಣ ವಾಹನಗಳನ್ನು ಅತೀ ವೇಗದಿಂದ ಚಲಾಯಿಸುವ ಕಾರಣ ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ಅಪಘಾತಗಳು ಸಂಭವಿಸುತ್ತಿದೆ. ವೇಗ ನಿಯಂತ್ರಣಕ್ಕೆ ಎರಡೂ ಕಡೆಗಳಲ್ಲಿ ಹಂಪ್ಸ್ ಅಳವಡಿಸಬೇಕೆಂದು ವಾಹನ ಚಾಲಕರು ಒತ್ತಾಯಿಸಿದ್ದಾರೆ. ಹಂಪ್ಸ್ ಹಾಕಲು ಸಾಧ್ಯವಿಲ್ಲದೇ ಇದ್ದಲ್ಲಿ ಬ್ಯಾರಿಕೇಡ್ ಅಳವಡಿಸಿ ಅಪಘಾತವನ್ನು ನಿಯಂತ್ರಿಸುವಂತೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

14 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

24 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago