Advertisement
ಅಪರಾಧ

ಕುಂಬ್ರದಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

Share

ಪುತ್ತೂರು: ಮಾಣಿ- ಮೈಸೂರು  ಹೆದ್ದಾರಿಯ ಶೇಖಮಲೆ ತಿರುವಿನಲ್ಲಿ ಸೋಮವಾರ   ಓವರ್‍ಟೇಕ್ ಮಾಡುವ ಭರಾಟೆಯಲ್ಲಿ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಸುಳ್ಯ ಕಡೆಯಿಂದ ಬರುತ್ತಿದ್ದ ಜಿಪ್ಸಿ- ಬೈಕ್ ಹಾಗೂ ಪುತ್ತೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ಖಾಸಗಿ ಬಸ್ಸು  ನಡುವೆ ಅಪಘಾತ ಸಂಭವಿಸಿದೆ. ರಸ್ತೆಯ ತಿರುವು ಅಪಾಯಕಾರಿಯಾಗಿದ್ದು ಈ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುತ್ತಿದ್ದ ವಾಹನ ಓವರ್‍ಟೇಕ್ ಮಾಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಭಾರೀ ಅಪಘಾತವನ್ನು ತಪ್ಪಿಸುವ ಉದ್ದೇಶದಲ್ಲಿ ಬಸ್ಸು ಚಾಲಕ ಬಸ್ಸನ್ನು ರಸ್ತೆಯ ಬದಿಯ ಇಳಿಜಾರಿಗೆ ಚಲಾಯಿಸಿದ್ದಾರೆ. ಅಪಘಾತದಿಂದ ಜಿಪ್ಸಿಯಲ್ಲಿದ್ದ  ಮಹಿಳೆ ಮತ್ತು ಬೈಕ್ ಸಹಸವಾರೆ ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ ಸವಿತಾರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿರುವ ಮಹಿಳೆಯೋರ್ವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಪ್ಸ್ ಅಳವಡಿಸಲು ಒತ್ತಾಯ:

ಶೇಖಮಲೆಯ ಈ ತಿರುವ ಅಪಾಯಕಾರಿಯಾಗಿದ್ದು ಈ ಹಿಂದೆಯೂ ಹಲವು ಬಾರಿ ಅಪಘಾತಗಳು ಸಂಭವಿಸಿದೆ. ಕುಂಬ್ರ ಕಡೆಯಿಂದ ತೆರಳುವ ವಾಹನಗಳಿಗೆ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುವ ವಾಹನಗಳು ಕಾಣದೆ ಇರುವುದು ಅಪಘಾತಕ್ಕೆ ಕಾರಣವಾಗುತ್ತಿದೆ. ರಸ್ತೆ ಅಗಲವಾಗಿರುವ ಕಾರಣ ವಾಹನಗಳನ್ನು ಅತೀ ವೇಗದಿಂದ ಚಲಾಯಿಸುವ ಕಾರಣ ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ಅಪಘಾತಗಳು ಸಂಭವಿಸುತ್ತಿದೆ. ವೇಗ ನಿಯಂತ್ರಣಕ್ಕೆ ಎರಡೂ ಕಡೆಗಳಲ್ಲಿ ಹಂಪ್ಸ್ ಅಳವಡಿಸಬೇಕೆಂದು ವಾಹನ ಚಾಲಕರು ಒತ್ತಾಯಿಸಿದ್ದಾರೆ. ಹಂಪ್ಸ್ ಹಾಕಲು ಸಾಧ್ಯವಿಲ್ಲದೇ ಇದ್ದಲ್ಲಿ ಬ್ಯಾರಿಕೇಡ್ ಅಳವಡಿಸಿ ಅಪಘಾತವನ್ನು ನಿಯಂತ್ರಿಸುವಂತೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

3 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

5 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

10 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

12 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

19 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago