Advertisement
ಅಪರಾಧ

ಕುಂಬ್ರದಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

Share

ಪುತ್ತೂರು: ಮಾಣಿ- ಮೈಸೂರು  ಹೆದ್ದಾರಿಯ ಶೇಖಮಲೆ ತಿರುವಿನಲ್ಲಿ ಸೋಮವಾರ   ಓವರ್‍ಟೇಕ್ ಮಾಡುವ ಭರಾಟೆಯಲ್ಲಿ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಸುಳ್ಯ ಕಡೆಯಿಂದ ಬರುತ್ತಿದ್ದ ಜಿಪ್ಸಿ- ಬೈಕ್ ಹಾಗೂ ಪುತ್ತೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ಖಾಸಗಿ ಬಸ್ಸು  ನಡುವೆ ಅಪಘಾತ ಸಂಭವಿಸಿದೆ. ರಸ್ತೆಯ ತಿರುವು ಅಪಾಯಕಾರಿಯಾಗಿದ್ದು ಈ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುತ್ತಿದ್ದ ವಾಹನ ಓವರ್‍ಟೇಕ್ ಮಾಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಭಾರೀ ಅಪಘಾತವನ್ನು ತಪ್ಪಿಸುವ ಉದ್ದೇಶದಲ್ಲಿ ಬಸ್ಸು ಚಾಲಕ ಬಸ್ಸನ್ನು ರಸ್ತೆಯ ಬದಿಯ ಇಳಿಜಾರಿಗೆ ಚಲಾಯಿಸಿದ್ದಾರೆ. ಅಪಘಾತದಿಂದ ಜಿಪ್ಸಿಯಲ್ಲಿದ್ದ  ಮಹಿಳೆ ಮತ್ತು ಬೈಕ್ ಸಹಸವಾರೆ ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ ಸವಿತಾರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿರುವ ಮಹಿಳೆಯೋರ್ವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಪ್ಸ್ ಅಳವಡಿಸಲು ಒತ್ತಾಯ:

ಶೇಖಮಲೆಯ ಈ ತಿರುವ ಅಪಾಯಕಾರಿಯಾಗಿದ್ದು ಈ ಹಿಂದೆಯೂ ಹಲವು ಬಾರಿ ಅಪಘಾತಗಳು ಸಂಭವಿಸಿದೆ. ಕುಂಬ್ರ ಕಡೆಯಿಂದ ತೆರಳುವ ವಾಹನಗಳಿಗೆ ತಿರುವಿನಲ್ಲಿ ಸುಳ್ಯ ಕಡೆಯಿಂದ ಬರುವ ವಾಹನಗಳು ಕಾಣದೆ ಇರುವುದು ಅಪಘಾತಕ್ಕೆ ಕಾರಣವಾಗುತ್ತಿದೆ. ರಸ್ತೆ ಅಗಲವಾಗಿರುವ ಕಾರಣ ವಾಹನಗಳನ್ನು ಅತೀ ವೇಗದಿಂದ ಚಲಾಯಿಸುವ ಕಾರಣ ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ಅಪಘಾತಗಳು ಸಂಭವಿಸುತ್ತಿದೆ. ವೇಗ ನಿಯಂತ್ರಣಕ್ಕೆ ಎರಡೂ ಕಡೆಗಳಲ್ಲಿ ಹಂಪ್ಸ್ ಅಳವಡಿಸಬೇಕೆಂದು ವಾಹನ ಚಾಲಕರು ಒತ್ತಾಯಿಸಿದ್ದಾರೆ. ಹಂಪ್ಸ್ ಹಾಕಲು ಸಾಧ್ಯವಿಲ್ಲದೇ ಇದ್ದಲ್ಲಿ ಬ್ಯಾರಿಕೇಡ್ ಅಳವಡಿಸಿ ಅಪಘಾತವನ್ನು ನಿಯಂತ್ರಿಸುವಂತೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

7 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

8 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

9 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

18 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

20 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago