Advertisement
ನಮ್ಮೂರ ಸುದ್ದಿ

ಕುಕ್ಕುಜಡ್ಕದಲ್ಲಿ ತಾಲೂಕು ಮಟ್ಟದ “ಸ್ವಚ್ಛ ಮೇವ ಜಯತೆ” ಸ್ವಚ್ಛತಾ ರಥ ಸಂಚಾರ ಸಮಾರೋಪ

Share

ಸುಳ್ಯ:ಸ್ವಚ್ಛ  ಗ್ರಾಮ ಯೋಜನೆಯ ಕಲ್ಪನೆಗಳು ಒಂದು ಗ್ರಾಮ ಪಂಚಾಯತ್‍ಗಳಿಗೆ ಮಾತ್ರ ಸೀಮಿತವಾಗಬಾರದು. ಬದಲಾಗಿ ಸ್ವಚ್ಛತೆಯ ಭಾವನೆಗಳು ಇತರ ಪಂಚಾಯತ್ ಗಳಿಗೆ ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಪ್ರೇರಣೆ ಆಗಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.

ಅವರು ಜಿಲ್ಲಾ ಪಂಚಾಯತ್ ಮಂಗಳೂರು ತಾಲೂಕು ಪಂಚಾಯತ್ ಸುಳ್ಯ, ಅಮರಮೂಡ್ನೂರು ಗ್ರಾ.ಪಂ ಹಾಗೂ ಗ್ರಾಮದ ಎಲ್ಲಾ ಶಾಲೆ ಅಂಗನವಾಡಿ, ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕುಕ್ಕುಜಡ್ಕ ಸಹಕಾರಿ ಸಂಘದ ಸಭಾಭವನದಲ್ಲಿ  ಸಂಜೆ ನಡೆದ ತಾಲೂಕು ಮಟ್ಟದ ಸ್ವಚ್ಚ ಮೇವ ಜಯತೇ ಸ್ವಚ್ಚತಾ ಆಂದೋಲನದ ಸ್ವಚ್ಚತಾ ರಥ ಸಂಚಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ  70 ವರ್ಷ ಕಳೆದರು ಸ್ವಚ್ಛತೆಯ ಜಾಗೃತಿ ಆಗಿಲ್ಲ. ಕಳೆದ ಕೆಲವು ವರ್ಷಗಳಿಂದ ಜನರಲ್ಲಿ ಜಾಗೃತಿಗಳು ಮೂಡತೊಡಗಿದೆ ಎಂದರು.

Advertisement

ಸಮಾರಂಭವನ್ನು ಉದ್ಘಾಟಿಸಿದ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಮಾತನಾಡಿ ಸ್ವಚ್ಛತಾ  ಆಂದೋಲನಗಳು ಕೇವಲ ಅಧಿಕಾರದ ಮಟ್ಟದಲ್ಲಿ ನಡೆದರೇ ಸಾಲದು. ತಳಮಟ್ಟದಲ್ಲಿ ಸ್ವಚ್ಚತೆ ಆಂದೋಲನಗಳು ಆದರೆ ಪರಿಸರ ಸ್ವಚ್ಚವಾಗುತ್ತದೆ. ಈ ಮೂಲಕ ದೇಶದ ಅಭಿವೃದ್ದಿಗೆ ಸ್ವಚ್ಛತಾ ಆಂದೋಲನಗಳು ಪೂರಕವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.

ಹಸಿ ಕಸ ಮತ್ತು ಒಣ ಕಸ ವಿಲೇವಾರಿಗಾಗಿ ಡಸ್ಟ್ ಬಿನ್ ಗಳನ್ನು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ವಿತರಣೆ ಮಾಡಿ, ನಾವು ಪ್ರಕೃತಿ ವಿರುದ್ಧ ಮಾಡಿದ್ದ ಸ್ವಯಂಕೃತ ಅಪರಾಧಗಳಿಂದ, ಅತಿಯಾದ ಸ್ವಾರ್ಥದಿಂದ ಇಂದು ಪ್ರಕೃತಿಯೇ ಮುನಿದಿದೆ. ಇನ್ನಾದರೂ ಪ್ರಕೃತಿ, ಪರಿಸರ ರಕ್ಷಣೆಯಲ್ಲಿ ನಾವೆಲ್ಲರು ಎಚ್ಚೆತ್ತುಕೊಳ್ಳವ ಅಗತ್ಯತೆ ಇದೆ. ಇದರ ಜತೆಯಲ್ಲಿಯೇ ಸ್ವಚ್ಛ ಗ್ರಾಮ ಯೋಜನೆಯ ಕಲ್ಪನೆಗಳು, ಕಾರ್ಯಗತವಾಗಿ, ಸ್ವಚ್ಛ ಮೇವ ಜಯತೇಯಾಗಬೇಕು ಎಂದರು.

Advertisement

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ, ಎಪಿಎಂಸಿ ಸದಸ್ಯೆ ಸುಕನ್ಯಾ ಭಟ್, ಚೊಕ್ಕಾಡಿ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಮೂಕಮಲೆ, ಅರಂತೋಡು ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಜಯಪ್ರಕಾಶ್, ಸ್ವಚ್ಛತಾ ರಥದ ಮೇಲ್ವಿಚಾರಕ ಕೃಷ್ಣಪ್ಪ, ಉಬರಡ್ಕ ಗ್ರಾ,ಪಂ ಪಿಡಿಒ ಸಂದೇಶ್, ಕುಕ್ಕುಜಡ್ಕ ಸೊಸೈಟಿ ಕಾರ್ಯನಿರ್ವಾಹಣಧಿಕಾರಿ ಮೋಹನ ಗೌಡ, ಅಮರಮೂಡ್ನೂರು ಪಂಚಾಯತ್ ಪಿಡಿಒ ಆಕಾಶ್, ಕಾರ್ಯದರ್ಶಿ ದಯಾನಂದ್ ಪತ್ತುಕುಂಜ, ಅಮರಮೂಡ್ನೂರು ಗ್ರಾಮ ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಸಹಕಾರಿ ಸಂಘದ ನಿರ್ದೇಶಕರು, ಶಾಲಾ ಮುಖ್ಯಶಿಕ್ಷಕರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

5 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

6 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

18 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

1 day ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago