ಕುಕ್ಕುಜಡ್ಕ: ಶೌರ್ಯಯುವತಿ ಮಂಡಲ (ರಿ.) ಪೈಲಾರು ಇದರ ವತಿಯಿಂದ ನ.14 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕದಲ್ಲಿ ನಡೆಸಲಾಯಿತು.
ಆ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ವಹಿಸಿದ್ದ ಶೌರ್ಯ ಯುವತಿ ಮಂಡಲದ ಅಧ್ಯಕ್ಷೆಯಾದ ಯಕ್ಷಿತಾ ಪಾರೆಯವರು ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಅವಕಾಶಗಳನ್ನು ನೀಡಿದರೆ, ಖಂಡಿತವಾಗಿ ಮುಂದೊಂದು ದಿನ ಅವರಿಗೆ ದೊಡ್ಡ ವೇದಿಕೆಗಳಲ್ಲಿ ಭಾಗವಹಿಸುವ ಅವಕಾಶ ದೊರಕುವುದು ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಕ-ರಕ್ಷಕ ಸಂಘದ ಸದಸ್ಯರಾದ ಗಂಗಾಧರ ಹಿರಿಯಡ್ಕರವರು ವಿದ್ಯಾರ್ಥಿಗಳಿಗೆ ನೆಹರುರವರ ವ್ಯಕ್ತಿತ್ವವನ್ನು ಪರಿಚಯಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಪ್ರಭಾರ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಮೂಕಮಲೆ ಹಾಗೂ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕ ಇದರ ಮುಖ್ಯ ಶಿಕ್ಷಕಿಯಾದ ಪೂರ್ಣಿಮರವರು ಮಕ್ಕಳಿಗೆ ಶುಭಾಶಯ ಹೇಳಿದರು. ನಂತರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿನಿಯರಾದ ಪ್ರಾರ್ಥನಾ ಹಾಗೂ ಸಿಂಚನಾರವರು ಪ್ರಾರ್ಥಿಸಿ, ಶೌರ್ಯ ಯುವತಿ ಮಂಡಲದ ಕಾರ್ಯದರ್ಶಿ ಜಯಶ್ರೀ ಕುಳ್ಳಂಪಾಡಿಯವರು ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿಯಾದ ವಸಂತಿಯವರು ವಂದಿಸಿದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…