ಬೆಳ್ಳಾರೆ: ಕುಕ್ಕುಜಡ್ಕ ಒಕ್ಕೂಟದ ದೊಡ್ಡಹಿತ್ಲು ನಿವಾಸಿ ಕೃಷ್ಣಪ್ಪ ಗೌಡರ ಮಗ ಲಕ್ಷಣ ಗೌಡರು ಮರದಿಂದ ಆಯತಪ್ಪಿ ಬಿದ್ದು ಕಳೆದ 10ವರ್ಷಗಳಿಂದ ಮಲಗಿದ ಸ್ಥಿತಿಯಲ್ಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಬಾಹುಬಲಿ ಮಹಾಮಸ್ತಕಾಭಿಷೇಕದ ನೆನಪಿಗಾಗಿ ಪೂಜ್ಯ ಖಾವಂದರು ಆರಂಭಿಸಿದ್ದ ಜನಚೇತನ ಯೋಜನೆಯಡಿಯಲ್ಲಿ ಲಕ್ಷ್ಮಣ ಗೌಡರಿಗೆ ವಾಟರ್ ಬೆಡ್ ನ್ನು ನೀಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ವಾಟರ್ ಬೆಡ್ ನ್ನು ಲಕ್ಷ್ಮಣ ಗೌಡ ಅವರ ಕುಟುಂಬಕ್ಕೆ ಹಸ್ತಾಂತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ ರೈ, ಊರಿನ ಹಿರಿಯ ವೆಂಕಟ್ರಮಣ ಇಟ್ಟಿಗುಂಡಿ, ವಲಯ ಮೇಲ್ವಿಚಾರಕ ಮುರಳೀಧರ ಎ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ, ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡ್ತುಗುಳಿ, ಸೇವಾಪ್ರತಿನಿಧಿ ಗಾಯತ್ರಿ ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…