ಬೆಳ್ಳಾರೆ: ಕುಕ್ಕುಜಡ್ಕ ಒಕ್ಕೂಟದ ದೊಡ್ಡಹಿತ್ಲು ನಿವಾಸಿ ಕೃಷ್ಣಪ್ಪ ಗೌಡರ ಮಗ ಲಕ್ಷಣ ಗೌಡರು ಮರದಿಂದ ಆಯತಪ್ಪಿ ಬಿದ್ದು ಕಳೆದ 10ವರ್ಷಗಳಿಂದ ಮಲಗಿದ ಸ್ಥಿತಿಯಲ್ಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಬಾಹುಬಲಿ ಮಹಾಮಸ್ತಕಾಭಿಷೇಕದ ನೆನಪಿಗಾಗಿ ಪೂಜ್ಯ ಖಾವಂದರು ಆರಂಭಿಸಿದ್ದ ಜನಚೇತನ ಯೋಜನೆಯಡಿಯಲ್ಲಿ ಲಕ್ಷ್ಮಣ ಗೌಡರಿಗೆ ವಾಟರ್ ಬೆಡ್ ನ್ನು ನೀಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ವಾಟರ್ ಬೆಡ್ ನ್ನು ಲಕ್ಷ್ಮಣ ಗೌಡ ಅವರ ಕುಟುಂಬಕ್ಕೆ ಹಸ್ತಾಂತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ ರೈ, ಊರಿನ ಹಿರಿಯ ವೆಂಕಟ್ರಮಣ ಇಟ್ಟಿಗುಂಡಿ, ವಲಯ ಮೇಲ್ವಿಚಾರಕ ಮುರಳೀಧರ ಎ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ, ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡ್ತುಗುಳಿ, ಸೇವಾಪ್ರತಿನಿಧಿ ಗಾಯತ್ರಿ ಉಪಸ್ಥಿತರಿದ್ದರು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…