ಸುಬ್ರಹ್ಮಣ್ಯ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭೋಜನ ಶಾಲೆಯಲ್ಲಿ ಹುರಿದಿಟ್ಟ ಮಸಾಲೆ ಕಟಾರದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಸಾರ್ವಜನಿಕರು, ಗ್ರಾಪಂ ಸದಸ್ಯರೊಬ್ಬರು ಸೇರಿದಂತೆ ಸ್ಥಳೀಯ ಭಕ್ತಾದಿಗಳ ಕರ್ತವ್ಯ ಪ್ರಜ್ಞೆ ಅನಾಹುತ ತಪ್ಪಿಸಿತು.
ಆದದ್ದು ಏನು ?
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭೋಜನಶಾಲೆಯಲ್ಲಿ ಹುರಿದಿಟ್ಟ ಮಸಾಲೆ ಕಟಾರದಲ್ಲಿ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿತು. ಹೊತ್ತಿಕೊಂಡ ಬೆಂಕಿ ಬಳಿಯೇ ಸುಮಾರು ತುಂಬಿದ 30 ಕ್ಕೂ ಅಧಿಕ ಗ್ಯಾಸ್ ಸಿಲಿಂಡರ್ ಕೂಡಾ ಇತ್ತು. ಅಪಾಯವನ್ನು ಅರಿತ ಸ್ಥಳೀಯರು ಜಾಗೃತರಾದರು.
ಭೋಜನಶಾಲೆಯಲ್ಲಿ ಬೆಂಕಿ ಗಮನಿಸಿದ ಸ್ಥಳೀಯರೊಬ್ಬರು ರಮೇಶ ಎನ್ನುವವರಿಗೆ ಕರೆ ಮಾಡಿದರು. ಈ ಸಂದರ್ಭ ಸಮೀಪದ ನೂಚಿಲದಲ್ಲಿ ದೈವದ ನೇಮದಲ್ಲಿದ್ದ ಅವರು ಇತರರಿಗೂ ಮಾಹಿತಿ ನೀಡಿದರು. ತಕ್ಷಣವೇ ಅಲ್ಲಿದ್ದ ಸುಮಾರು 600 ರಷ್ಟು ಮಂದಿ ದೇವಸ್ಥಾನದ ಭೋಜನ ಶಾಲೆಗೆ ಬಂದು ಬೆಂಕಿ ನಂದಿಸಿದರು. ಬಳಿಕ ಮಸಾಲೆ ಸಹಿತ ಭೋಜನಶಾಲೆಯಿಂದ ಹೊರಗೆ ತಂದು ಭೋಜನ ಶಾಲೆಯನ್ನು ಸ್ವಚ್ಛಗೊಳಿಸಲಾಯಿತು.
ಬೆಂಕಿ ಹಿಡಿದ ಕಠಾರವನ್ನು ನಂದಿಸಲು ತಕ್ಷಣವೇ ಬಟ್ಟೆ ಸಿಗದೆ ಇದ್ದಾಗ ಗ್ರಾ.ಪಂ ಸದಸ್ಯ ಮಣಿಕಂಠ ಎಂಬವರು ಧರಿಸಿದ ಅಂಗಿ ಕಳಚಿ ಅದರ ಸಹಾಯದಿಂದ ಕಠಾರವನ್ನು ಹೊರಹಾಕಿದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…