Advertisement
ಸುದ್ದಿಗಳು

ಕುಕ್ಕೆಯ ಬ್ರಹ್ಮ ರಥದ ಮೇಲೆ ಸ್ವಾಮೀಜಿ ಏರಿದ್ದು ಈಗ ಇನ್ನೊಂದು ವಿವಾದ……!

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೇಲೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಏರಿದ್ದು ಈಗ ಇನ್ನೊಂದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕ ಹತ್ತು ಸಮಸ್ತರು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಮೀಪದ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಕಳೆದ ಕೆಲವು ಸಮಯಗಳಿಂದ ವಿವಾದಗಳು, ದೂರು-ಪ್ರತಿದೂರು ನಡೆಯುತ್ತಿತ್ತು. ಸರ್ಪಸಂಸ್ಕಾರದಿಂದ ಆರಂಭಗೊಂಡ ವಿವಾದ ತಣ್ಣಗಾಗಲಿಲ್ಲ. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಡೆಯಬೇಕಾದ ಸರ್ಪಸಂಸ್ಕಾರ ಸೇವೆಯು ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಕೂಡಾ ನಡೆಯುತ್ತಿರುವುದರ ಬಗ್ಗೆ ಚರ್ಚೆ ಆರಂಭವಾಗಿ ದೂರು-ಪ್ರತಿದೂರು ನಡೆದ ಬಳಿಕ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಗಿತ್ತು. ಅಲ್ಲೂ ಅಂತಿಮ ನಿರ್ಧಾರವಾಗದೆ ಮಂಗಳೂರಿನಲ್ಲಿ  ಸಭೆ ನಡೆಸಿ ಇತ್ಯರ್ಥ ನಡೆಸುವ ನಿರ್ಧಾರಕ್ಕೆ ಬರಲಾಗಿತ್ತು. ಹಾಗಿದ್ದರೂ ವಿವಾದ ತಣ್ಣಗಾಗಲಿಲ್ಲ. ಬೇರೆ ಬೇರೆ ಸಂಗತಿಗಳಲ್ಲಿ  ವಿವಾದ ನಡೆಯುತ್ತಲೇ ಇತ್ತು. ಇದೀಗ ಮತ್ತೊಂದು ವಿವಾದ ಎದ್ದಿದೆ.

ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥವು ಅದ್ದೂರಿಯಾಗಿ ಕುಕ್ಕೆ ತಲಪಿದ ಬಳಿಕ ಇದೀಗ ಧಾರ್ಮಿಕ, ವೈದಿಕ ವಿಧಿವಿಧಾನಗಳು ನಡೆಯುತ್ತಿದೆ. ಈ ಸಂದರ್ಭ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ರಥ ಏರಿರುವುದು  ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕ ಹತ್ತು ಸಮಸ್ತರು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದೆ.

ಶ್ರೀ ದೇವಳದ ಬ್ರಹ್ಮರಥಕ್ಕೆ ತನ್ನದೇ ಆದ ಘನತೆ , ಗೌರವ ಇದೆ. ಬ್ರಹ್ಮರಥಕ್ಕೆ ಶ್ರೀ ದೇವರನ್ನು ಹೊರುವ ಅರ್ಚಕರು, ತಂತ್ರಿಗಳು ಮಾತ್ರಾ ಏರಬೇಕು ವಿನಹ ಬೇರೆ ಯಾರೂ ಹತ್ತುವಂತಿಲ್ಲ ಹೀಗಿರುವಾಗ ಸಂಪುಟ ನರಸಿಂಹನ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥರು ನೂತನ ಬ್ರಹ್ಮರಥ ಏರಿದ್ದಾರೆ. ಅಲ್ಲದೆ ಮಠಕ್ಕೆ ದೇವಸ್ಥಾನದಲ್ಲಿ  ಪೂಜಾ ಕಾರ್ಯದಲ್ಲಿ , ವಿಧಿವಿಧಾನದಲ್ಲಿ ಯಾವುದೇ ಹಕ್ಕಿಲ್ಲ. 1886 ರ ತೀರ್ಪಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಿ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಯಾವುದೇ ರೀತಿಯ ಹಕ್ಕಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಅಲ್ಲದೆ ಪ್ರತ್ಯೇಕ ಪೂಜಾ ವಿಧಿವಿಧಾನಗಳನ್ನು ಮಾಡಿಕೊಂಡು ಬರಲಾಗುತ್ತದೆ. ಹೀಗಾಗಿ ಈಗ ರಥ ಏರಿರುವುದು ಶಿಷ್ಟಾಚಾರ ಉಲ್ಲಂಘನೆ ಇದಾಗಿದೆ. ಆದ್ದರಿಂದ ರಥಕ್ಕೆ ಹತ್ತಲು ಅವಕಾಶ ಮಾಡಿಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹದ್ದಕ್ಕೆ  ಅವಕಾಶ ನೀಡಬಾರದು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕ ಹತ್ತು ಸಮಸ್ತ ದೂರಿನಲ್ಲಿ ತಿಳಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

18 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

22 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

23 hours ago