Advertisement
ಸುದ್ದಿಗಳು

ಕುಕ್ಕೆಯ ಬ್ರಹ್ಮ ರಥದ ಮೇಲೆ ಸ್ವಾಮೀಜಿ ಏರಿದ್ದು ಈಗ ಇನ್ನೊಂದು ವಿವಾದ……!

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೇಲೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಏರಿದ್ದು ಈಗ ಇನ್ನೊಂದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕ ಹತ್ತು ಸಮಸ್ತರು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಮೀಪದ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಕಳೆದ ಕೆಲವು ಸಮಯಗಳಿಂದ ವಿವಾದಗಳು, ದೂರು-ಪ್ರತಿದೂರು ನಡೆಯುತ್ತಿತ್ತು. ಸರ್ಪಸಂಸ್ಕಾರದಿಂದ ಆರಂಭಗೊಂಡ ವಿವಾದ ತಣ್ಣಗಾಗಲಿಲ್ಲ. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಡೆಯಬೇಕಾದ ಸರ್ಪಸಂಸ್ಕಾರ ಸೇವೆಯು ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಕೂಡಾ ನಡೆಯುತ್ತಿರುವುದರ ಬಗ್ಗೆ ಚರ್ಚೆ ಆರಂಭವಾಗಿ ದೂರು-ಪ್ರತಿದೂರು ನಡೆದ ಬಳಿಕ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಗಿತ್ತು. ಅಲ್ಲೂ ಅಂತಿಮ ನಿರ್ಧಾರವಾಗದೆ ಮಂಗಳೂರಿನಲ್ಲಿ  ಸಭೆ ನಡೆಸಿ ಇತ್ಯರ್ಥ ನಡೆಸುವ ನಿರ್ಧಾರಕ್ಕೆ ಬರಲಾಗಿತ್ತು. ಹಾಗಿದ್ದರೂ ವಿವಾದ ತಣ್ಣಗಾಗಲಿಲ್ಲ. ಬೇರೆ ಬೇರೆ ಸಂಗತಿಗಳಲ್ಲಿ  ವಿವಾದ ನಡೆಯುತ್ತಲೇ ಇತ್ತು. ಇದೀಗ ಮತ್ತೊಂದು ವಿವಾದ ಎದ್ದಿದೆ.

ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥವು ಅದ್ದೂರಿಯಾಗಿ ಕುಕ್ಕೆ ತಲಪಿದ ಬಳಿಕ ಇದೀಗ ಧಾರ್ಮಿಕ, ವೈದಿಕ ವಿಧಿವಿಧಾನಗಳು ನಡೆಯುತ್ತಿದೆ. ಈ ಸಂದರ್ಭ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ರಥ ಏರಿರುವುದು  ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕ ಹತ್ತು ಸಮಸ್ತರು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದೆ.

ಶ್ರೀ ದೇವಳದ ಬ್ರಹ್ಮರಥಕ್ಕೆ ತನ್ನದೇ ಆದ ಘನತೆ , ಗೌರವ ಇದೆ. ಬ್ರಹ್ಮರಥಕ್ಕೆ ಶ್ರೀ ದೇವರನ್ನು ಹೊರುವ ಅರ್ಚಕರು, ತಂತ್ರಿಗಳು ಮಾತ್ರಾ ಏರಬೇಕು ವಿನಹ ಬೇರೆ ಯಾರೂ ಹತ್ತುವಂತಿಲ್ಲ ಹೀಗಿರುವಾಗ ಸಂಪುಟ ನರಸಿಂಹನ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥರು ನೂತನ ಬ್ರಹ್ಮರಥ ಏರಿದ್ದಾರೆ. ಅಲ್ಲದೆ ಮಠಕ್ಕೆ ದೇವಸ್ಥಾನದಲ್ಲಿ  ಪೂಜಾ ಕಾರ್ಯದಲ್ಲಿ , ವಿಧಿವಿಧಾನದಲ್ಲಿ ಯಾವುದೇ ಹಕ್ಕಿಲ್ಲ. 1886 ರ ತೀರ್ಪಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಿ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಯಾವುದೇ ರೀತಿಯ ಹಕ್ಕಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಅಲ್ಲದೆ ಪ್ರತ್ಯೇಕ ಪೂಜಾ ವಿಧಿವಿಧಾನಗಳನ್ನು ಮಾಡಿಕೊಂಡು ಬರಲಾಗುತ್ತದೆ. ಹೀಗಾಗಿ ಈಗ ರಥ ಏರಿರುವುದು ಶಿಷ್ಟಾಚಾರ ಉಲ್ಲಂಘನೆ ಇದಾಗಿದೆ. ಆದ್ದರಿಂದ ರಥಕ್ಕೆ ಹತ್ತಲು ಅವಕಾಶ ಮಾಡಿಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹದ್ದಕ್ಕೆ  ಅವಕಾಶ ನೀಡಬಾರದು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕ ಹತ್ತು ಸಮಸ್ತ ದೂರಿನಲ್ಲಿ ತಿಳಿಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

4 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

5 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago