ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದಲ್ಲಿ ದೇಗುಲದ ಕಾಣಿಕೆ ಹುಂಡಿಯಿಂದ ಕಳ್ಳತನ ಮಾಡುತಿದ್ದ ತುಮಕೂರು ಮೂಲದ ತಿಪಟೂರು ಅಶ್ವಿನ್ (20) ಎಂಬಾತ ಶುಕ್ರವಾರ ಸಿಕ್ಕಿಬಿದ್ದಿದ್ದಾನೆ.
ಗುರುವಾರ ರಾತ್ರಿ ದೇಗುಲದ ಒಳಾಂಗಣದಲ್ಲಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಅಶ್ವಿನ್ ಬಗ್ಗೆ ದೇಗುಲದ ಸೆಕ್ಯೂರಿಟಿಯಲ್ಲಿದ್ದವರ ಗಮನಕ್ಕೆ ಬಂದಿದೆ. ನಂತರ ಗಮನಿಸಿದಾಗ ಕುಕ್ಕೆಲಿಂಗ ಗುಡಿಯ ಎದುರಿನ ಹುಂಡಿಗೆ ಭಕ್ತರು ಹಾಕಿದ ಕಾಣಿಕೆ ಹುಂಡಿಯ ಮೇಲ್ಭಾಗದಿಂದ ಹಣ ತೆಗೆದು ಕಿಸೆಯಲ್ಲಿ ತುಂಬಿಸಿಕೊಳ್ಳುತಿದ್ದ. ಇದೇ ರೀತಿ ಎಲ್ಲ ಕಾಣಿಕೆ ಹುಂಡಿಗಳಿಂದ ಕಳವು ಮಾಡುತ್ತಿರುವುದು ಬಳಿಕ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಗೊತ್ತಾಗಿದೆ.
ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಎಂ.ಎಚ್ ರವೀಂದ್ರ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈಗ ನ್ಯಾಯಾಂಗ ಅಶ್ವಿನ್ ಬಂಧನದಲ್ಲಿದ್ದಾನೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…