ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದಲ್ಲಿ ದೇಗುಲದ ಕಾಣಿಕೆ ಹುಂಡಿಯಿಂದ ಕಳ್ಳತನ ಮಾಡುತಿದ್ದ ತುಮಕೂರು ಮೂಲದ ತಿಪಟೂರು ಅಶ್ವಿನ್ (20) ಎಂಬಾತ ಶುಕ್ರವಾರ ಸಿಕ್ಕಿಬಿದ್ದಿದ್ದಾನೆ.
ಗುರುವಾರ ರಾತ್ರಿ ದೇಗುಲದ ಒಳಾಂಗಣದಲ್ಲಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಅಶ್ವಿನ್ ಬಗ್ಗೆ ದೇಗುಲದ ಸೆಕ್ಯೂರಿಟಿಯಲ್ಲಿದ್ದವರ ಗಮನಕ್ಕೆ ಬಂದಿದೆ. ನಂತರ ಗಮನಿಸಿದಾಗ ಕುಕ್ಕೆಲಿಂಗ ಗುಡಿಯ ಎದುರಿನ ಹುಂಡಿಗೆ ಭಕ್ತರು ಹಾಕಿದ ಕಾಣಿಕೆ ಹುಂಡಿಯ ಮೇಲ್ಭಾಗದಿಂದ ಹಣ ತೆಗೆದು ಕಿಸೆಯಲ್ಲಿ ತುಂಬಿಸಿಕೊಳ್ಳುತಿದ್ದ. ಇದೇ ರೀತಿ ಎಲ್ಲ ಕಾಣಿಕೆ ಹುಂಡಿಗಳಿಂದ ಕಳವು ಮಾಡುತ್ತಿರುವುದು ಬಳಿಕ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಗೊತ್ತಾಗಿದೆ.
ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಎಂ.ಎಚ್ ರವೀಂದ್ರ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈಗ ನ್ಯಾಯಾಂಗ ಅಶ್ವಿನ್ ಬಂಧನದಲ್ಲಿದ್ದಾನೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…