ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದಲ್ಲಿ ದೇಗುಲದ ಕಾಣಿಕೆ ಹುಂಡಿಯಿಂದ ಕಳ್ಳತನ ಮಾಡುತಿದ್ದ ತುಮಕೂರು ಮೂಲದ ತಿಪಟೂರು ಅಶ್ವಿನ್ (20) ಎಂಬಾತ ಶುಕ್ರವಾರ ಸಿಕ್ಕಿಬಿದ್ದಿದ್ದಾನೆ.
ಗುರುವಾರ ರಾತ್ರಿ ದೇಗುಲದ ಒಳಾಂಗಣದಲ್ಲಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಅಶ್ವಿನ್ ಬಗ್ಗೆ ದೇಗುಲದ ಸೆಕ್ಯೂರಿಟಿಯಲ್ಲಿದ್ದವರ ಗಮನಕ್ಕೆ ಬಂದಿದೆ. ನಂತರ ಗಮನಿಸಿದಾಗ ಕುಕ್ಕೆಲಿಂಗ ಗುಡಿಯ ಎದುರಿನ ಹುಂಡಿಗೆ ಭಕ್ತರು ಹಾಕಿದ ಕಾಣಿಕೆ ಹುಂಡಿಯ ಮೇಲ್ಭಾಗದಿಂದ ಹಣ ತೆಗೆದು ಕಿಸೆಯಲ್ಲಿ ತುಂಬಿಸಿಕೊಳ್ಳುತಿದ್ದ. ಇದೇ ರೀತಿ ಎಲ್ಲ ಕಾಣಿಕೆ ಹುಂಡಿಗಳಿಂದ ಕಳವು ಮಾಡುತ್ತಿರುವುದು ಬಳಿಕ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಗೊತ್ತಾಗಿದೆ.
ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಎಂ.ಎಚ್ ರವೀಂದ್ರ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈಗ ನ್ಯಾಯಾಂಗ ಅಶ್ವಿನ್ ಬಂಧನದಲ್ಲಿದ್ದಾನೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…