ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದಲ್ಲಿ ದೇಗುಲದ ಕಾಣಿಕೆ ಹುಂಡಿಯಿಂದ ಕಳ್ಳತನ ಮಾಡುತಿದ್ದ ತುಮಕೂರು ಮೂಲದ ತಿಪಟೂರು ಅಶ್ವಿನ್ (20) ಎಂಬಾತ ಶುಕ್ರವಾರ ಸಿಕ್ಕಿಬಿದ್ದಿದ್ದಾನೆ.
ಗುರುವಾರ ರಾತ್ರಿ ದೇಗುಲದ ಒಳಾಂಗಣದಲ್ಲಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಅಶ್ವಿನ್ ಬಗ್ಗೆ ದೇಗುಲದ ಸೆಕ್ಯೂರಿಟಿಯಲ್ಲಿದ್ದವರ ಗಮನಕ್ಕೆ ಬಂದಿದೆ. ನಂತರ ಗಮನಿಸಿದಾಗ ಕುಕ್ಕೆಲಿಂಗ ಗುಡಿಯ ಎದುರಿನ ಹುಂಡಿಗೆ ಭಕ್ತರು ಹಾಕಿದ ಕಾಣಿಕೆ ಹುಂಡಿಯ ಮೇಲ್ಭಾಗದಿಂದ ಹಣ ತೆಗೆದು ಕಿಸೆಯಲ್ಲಿ ತುಂಬಿಸಿಕೊಳ್ಳುತಿದ್ದ. ಇದೇ ರೀತಿ ಎಲ್ಲ ಕಾಣಿಕೆ ಹುಂಡಿಗಳಿಂದ ಕಳವು ಮಾಡುತ್ತಿರುವುದು ಬಳಿಕ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಗೊತ್ತಾಗಿದೆ.
ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಎಂ.ಎಚ್ ರವೀಂದ್ರ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈಗ ನ್ಯಾಯಾಂಗ ಅಶ್ವಿನ್ ಬಂಧನದಲ್ಲಿದ್ದಾನೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…