ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದಲ್ಲಿ ದೇಗುಲದ ಕಾಣಿಕೆ ಹುಂಡಿಯಿಂದ ಕಳ್ಳತನ ಮಾಡುತಿದ್ದ ತುಮಕೂರು ಮೂಲದ ತಿಪಟೂರು ಅಶ್ವಿನ್ (20) ಎಂಬಾತ ಶುಕ್ರವಾರ ಸಿಕ್ಕಿಬಿದ್ದಿದ್ದಾನೆ.
ಗುರುವಾರ ರಾತ್ರಿ ದೇಗುಲದ ಒಳಾಂಗಣದಲ್ಲಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಅಶ್ವಿನ್ ಬಗ್ಗೆ ದೇಗುಲದ ಸೆಕ್ಯೂರಿಟಿಯಲ್ಲಿದ್ದವರ ಗಮನಕ್ಕೆ ಬಂದಿದೆ. ನಂತರ ಗಮನಿಸಿದಾಗ ಕುಕ್ಕೆಲಿಂಗ ಗುಡಿಯ ಎದುರಿನ ಹುಂಡಿಗೆ ಭಕ್ತರು ಹಾಕಿದ ಕಾಣಿಕೆ ಹುಂಡಿಯ ಮೇಲ್ಭಾಗದಿಂದ ಹಣ ತೆಗೆದು ಕಿಸೆಯಲ್ಲಿ ತುಂಬಿಸಿಕೊಳ್ಳುತಿದ್ದ. ಇದೇ ರೀತಿ ಎಲ್ಲ ಕಾಣಿಕೆ ಹುಂಡಿಗಳಿಂದ ಕಳವು ಮಾಡುತ್ತಿರುವುದು ಬಳಿಕ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಗೊತ್ತಾಗಿದೆ.
ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಎಂ.ಎಚ್ ರವೀಂದ್ರ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈಗ ನ್ಯಾಯಾಂಗ ಅಶ್ವಿನ್ ಬಂಧನದಲ್ಲಿದ್ದಾನೆ.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…