ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದಲ್ಲಿ ದೇಗುಲದ ಕಾಣಿಕೆ ಹುಂಡಿಯಿಂದ ಕಳ್ಳತನ ಮಾಡುತಿದ್ದ ತುಮಕೂರು ಮೂಲದ ತಿಪಟೂರು ಅಶ್ವಿನ್ (20) ಎಂಬಾತ ಶುಕ್ರವಾರ ಸಿಕ್ಕಿಬಿದ್ದಿದ್ದಾನೆ.
ಗುರುವಾರ ರಾತ್ರಿ ದೇಗುಲದ ಒಳಾಂಗಣದಲ್ಲಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಅಶ್ವಿನ್ ಬಗ್ಗೆ ದೇಗುಲದ ಸೆಕ್ಯೂರಿಟಿಯಲ್ಲಿದ್ದವರ ಗಮನಕ್ಕೆ ಬಂದಿದೆ. ನಂತರ ಗಮನಿಸಿದಾಗ ಕುಕ್ಕೆಲಿಂಗ ಗುಡಿಯ ಎದುರಿನ ಹುಂಡಿಗೆ ಭಕ್ತರು ಹಾಕಿದ ಕಾಣಿಕೆ ಹುಂಡಿಯ ಮೇಲ್ಭಾಗದಿಂದ ಹಣ ತೆಗೆದು ಕಿಸೆಯಲ್ಲಿ ತುಂಬಿಸಿಕೊಳ್ಳುತಿದ್ದ. ಇದೇ ರೀತಿ ಎಲ್ಲ ಕಾಣಿಕೆ ಹುಂಡಿಗಳಿಂದ ಕಳವು ಮಾಡುತ್ತಿರುವುದು ಬಳಿಕ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಗೊತ್ತಾಗಿದೆ.
ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಎಂ.ಎಚ್ ರವೀಂದ್ರ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈಗ ನ್ಯಾಯಾಂಗ ಅಶ್ವಿನ್ ಬಂಧನದಲ್ಲಿದ್ದಾನೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…