ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭೇಟಿ ನೀಡಿ ಸಿದ್ಧತಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ದೇವಸ್ಥಾನದಲ್ಲಿ ರಂಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಿದ್ಧತೆಗಳ ಮಾಹಿತಿ ಪಡೆದು ಸೂಕ್ತ ನಿರ್ದೇಶನಗಳನ್ನು ನೀಡಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಚಂಪಾ ಷಷ್ಠಿ ಮಹೋತ್ಸವದ ಯಶಸ್ಸಿಗೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಪೊಲೀಸ್ ಭದ್ರತೆ ಹಾಗೂ ಭದ್ರತೆ ದೃಷ್ಟಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ, ಕಳೆದ ಬಾರಿಗಿಂತ ಈ ಬಾರಿ 200 ಪೊಲೀಸರನ್ನು ಹೆಚ್ಚುವರಿಯಾಗಿ ನಿಯೋಜನೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು. ಇದುವರೆಗೆ 70 ಜನ ಬ್ರಹ್ಮರಥ ಸೇವಾರ್ಥಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು.
ಪಾರ್ಕಿಂಗ್ ವ್ಯವಸ್ಥೆ:
ಜಾತ್ರಾ ಉತ್ಸವಕ್ಕೆ ವಾಹನಗಳ ಸೂಕ್ತ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದ್ದು ಸರಕಾರಿ ಬಸ್ ಗಳಿಗೆ ಕುಮಾರಧಾರ ಮತ್ತು ಇಂಜಾಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಉಚಿತವಾಗಿ ಮಿನಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.ಇತರ ವಾಹನಗಳಿಗೆ ಅಲ್ಲಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಸಂದರ್ಭ ದೇವಸ್ಥಾನದ ಆಡಳಿತಾಧಿಕಾರ, ಅಪರ ಜಿಲ್ಲಾಧಿಕಾರಿ ರೂಪಾ, ಕಾರ್ಯ ನಿರ್ವಹಣಾಧಿಕಾರಿಯಾಗಿ, ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ , ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು ಉಪಸ್ಥಿತರಿದ್ದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…