Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯಕ್ಕೆ ಶೀಘ್ರದಲ್ಲಿ ಬರಲಿದೆ ಬ್ರಹ್ಮರಥ

Share

ಸುಬ್ರಹ್ಮಣ್ಯ :ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾನಿಗಳ ನೆರವಿನಿಂದ ನಿರ್ಮಾಣವಾಗುತ್ತಿರುವ ನೂತನ ಬ್ರಹ್ಮರಥವನ್ನು ಮುಂದಿನ ತಿಂಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ  ತರುವ ನಿರ್ಧಾರ ಹಾಗೂ ಮುಂದಿನ ತಿಂಗಳಲ್ಲಿ ಆದಿ ಸುಬ್ರಹ್ಮಣ್ಯದಲ್ಲಿ ನೂತನವಾಗಿ ನಿರ್ಮಾಣವಾದ 182 ಕೊಠಡಿಗಳಿರುವ ನೂತನ ವಸತಿಗೃಹವನ್ನು ಲೋಕಾರ್ಪಣೆಗೊಳಿಸಲು ನಿರ್ಧರಿಸಲಾಗಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಚೇರಿಯ ಎರಡನೆ ಮಹಡಿಯಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿ ಸಭೆ ಬಳಿಕ ಅವರು ಸಭೆಯಲ್ಲಿ ಕೈಗೊಂಡ ಕೆಲ ನಿರ್ಧಾರಗಳ ಬಗ್ಗೆ ತಿಳಿಸಿದರು.ಕುಂದಾಪುರ ಕೋಟೇಶ್ವರದಲ್ಲಿ ನೂತನ ಬ್ರಹ್ಮರಥ ನಿರ್ಮಾಣವಾಗುತ್ತಿದ್ದು ರಥದ ಕೆಲಸ ಬಹುತೇಕ ಅಂತಿಮಗೊಂಡಿದೆ. ರಥವನ್ನು ಕುಕ್ಕೆಗೆ ಮುಂದಿನ ತಿಂಗಳು ತರುವ ಕುರಿತು ನಿರ್ಧರಿಸಲಾಗಿದೆ. ಆ.31 ರಂದು ದೇವಸ್ಥಾನದ ಆಡಳಿತ ಸಮಿತಿ ನೇತೃತ್ವದಲ್ಲಿ ನಿಯೋಗ ಕೋಟೇಶ್ವರಕ್ಕೆ ತೆರಳಲಿದೆ. ರಥ ತರುವ ರಸ್ತೆ- ಹೆದ್ದಾರಿ ಅನುಮತಿ ಇತ್ಯಾದಿಗಳ ಕುರಿತು ರಥ ಶಿಲ್ಪಿ, ರಥದ ದಾನಿಗಳ ಜತೆ ಅಲ್ಲಿ ಚರ್ಚೆ ನಡೆಸಿ ಬಳಿಕ ದಿನ ನಿಗದಿಪಡಿಸಿ ಶುಭಮಹೂರ್ತದಲ್ಲಿ ತರುವ ಕೆಲಸ ನಡೆಯುತ್ತದೆ ಎಂದರು.

ದೇವಸ್ಥಾನದ ಹೊರಾಂಗಣ ಸುತ್ತುಪೌಳಿ ಮರು ದುರಸ್ತಿ ಕಾರ್ಯವು ಟೆಂಡರು ಹಂತದಲ್ಲಿದೆ. ಅದು ಪ್ರಕ್ರಿಯೆ ಪೂರ್ಣಗೊಂಡಲ್ಲಿ ಅದರ ಕಾರ್ಯವನ್ನು ನಡೆಸುವ ಬಗ್ಗೆಯೂ ಚರ್ಚೆ ನಡೆದಿದೆ. ಕುಮಾರಸ್ವಾಮಿ ಅವರ ಮಹತ್ವಕಾಂಕ್ಷೆಯ ಚಿಣ್ಣದ ರಥ ನಿರ್ಮಾಣಕ್ಕೆ ಸಂಬಂದಿಸಿ ಶೀಘ್ರ ಅನುಮತಿ ದೊರೆತಲ್ಲಿ ನಿರ್ಮಾಣ ಕೆಲಸ ಆರಂಭಿಸಲಾಗುತ್ತದೆ. ರಥದ ಪೌಂಡೆಶನ್ ಇತ್ಯಾದಿ ಕಾರ್ಯಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದರು.

ಆದಿ ಸುಬ್ರಹ್ಮಣ್ಯದಲ್ಲಿ ನೂತನವಾಗಿ 182 ಕೊಠಡಿಯ ವಸತಿಗೃಹ ನಿರ್ಮಾಣವಾಗಿ ಉದ್ಘಾಟನೆ ಬಾಕಿ ಉಳಿದಿದ್ದು ಅದನ್ನು ಅಕ್ಟೋಬರ್ ಮೊದಲ ವಾರದಲ್ಲಿ ಲೋಕಾರ್ಪಣೆಗೊಳಿಸಲು ನಿರ್ಧರಿಸಲಾಗಿದೆ. ವಸತಿಗೃಹಕ್ಕೆ ಪೀಠೋಪಕರಣ ಅಳವಡಿಸಲು ಗುತ್ತಿಗೆ ನೀಡಲಾಗಿದ್ದು ಜೋಡಿಸುವ ಕೆಲಸ ನಡೆಯುತ್ತಿದೆ. ತಿಂಗಳೊಳಗೆ ಪೂರ್ಣಗೊಳಿಸಿ ನೀಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

ದೇಗುಲಕ್ಕೆ ಆಗಮಿಸುವ ಭಕ್ತರ ಹಿತ ಕಾಯುವ ಸಲುವಾಗಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದ್ದು ಅವುಗಳಲ್ಲಿ ಹೆಚ್ಚಿನ ಕಾಮಗಾರಿಗಳು ಪೂರ್ಣಗೊಂಡಿವೆ. ಬಾಕಿ ಉಳಿದ ಕಾಮಗಾರಿಗಳಿಗೆ ವೇಗ ನೀಡುವ ಬಗ್ಗೆಯೂ ಚರ್ಚೆ ನಡೆದಿರುವುದಾಗಿ ಅವರು ತಿಳಿಸಿದರು.

ದೇವಸ್ಥಾನದ ಕಾರ್ಯನಿರ್ವಾಹಣಾ„ಕಾರಿ ರವೀಂದ್ರ ಎಂ.ಎಚ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ಕೇನ್ಯ ರವೀಂದ್ರನಾಥ ಶೆಟ್ಟಿ, ಮಹೇಶ್ ಕುಮಾರ್ ಕರಿಕ್ಕಳ, ರಾಜೀವಿ ರೈ ಆರ್, ದಮಯಂತಿ ಕೂಜುಗೋಡು, ಮಾಧವ. ಡಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

3 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

3 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

11 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

11 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago