ಕುಕ್ಕೆ ಸುಬ್ರಹ್ಮಣ್ಯ: ರಾಜ್ಯ ಅಪರಾಧ ನಿಗ್ರಹ ದಳದ ವತಿಯಿಂದ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರಿಗೆ ಲಿಖಿತ ಮನವಿ ಸಲ್ಲಿಕೆ

November 27, 2019
11:55 AM

ಬೆಳ್ಳಾರೆ: ಕುಕ್ಕೆ ಸುಬ್ರಹ್ಮಣ್ಯದ ಮುಂಭಾಗಿಲದಲ್ಲಿ ಇರುವ ಲೋಹ ಪರಿಶೋಧಕ ಯಂತ್ರ ಕಳೆದ ಹಲವು ದಿನಗಳಿಂದ ಕೆಟ್ಟು ಹೋಗಿದ್ದು, ದೇವಸ್ಥಾನದ ಹೊರಾಂಗಣದಲ್ಲಿಯೂ ಸಿಸಿ ಟಿವಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದೆಲ್ಲವೂ ಭದ್ರತೆ ಹಾಗು ಸುರಕ್ಷತೆಯ ಲೋಪವಾಗಿದೆ. ಇದನ್ನು ಗಮನಿಸಿ ಕೂಡಲೆ ವ್ಯವಸ್ಥೆ ಸರಿಪಡಿಸಿಕೊಡಬೇಕೆಂದು ಆಗ್ರಹಿಸಿ ರಾಜ್ಯ ಅಪರಾಧ ನಿಗ್ರಹ ದಳದ ವತಿಯಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರಿಗೆ ಲಿಖಿತ ಮನವಿ ಸಲ್ಲಿಸಲಾಯಿತು.

Advertisement
Advertisement

ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಮನವಿದಾರರಿಗೆ ಭರವಸೆ ನೀಡಿದರು. ಅಪರಾಧ ನಿಗ್ರಹ ದಳದ ರಾಜ್ಯಾಧ್ಯಕ್ಷ ಪ್ರವೀಣ ರೈ ಮರುವಂಜ, ಜಿಲ್ಲಾಧ್ಯಕ್ಷ ರಾಜಾರಾಂ ಭಟ್ ಎಡಕ್ಕಾನ, ಮೈಸೂರು ವಿಭಾಗದ ಗೀತಾ ಮುತ್ತಪ್ಪ, ತುಳುನಾಡು ರಕ್ಷಣಾ ವೇದಿಕೆಯ ಸುರೇಶ್ ಉಜಿರಡ್ಕ, ಎನ್.ಎಸ್.ಯು.ಐ ಸುಳ್ಯ ಘಟಕ ಅಧ್ಯಕ್ಷ ಪವನ್ ರೈ ಮರುವಂಜ ಉಪಸ್ಥಿತರಿದ್ದರು.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ
June 27, 2025
9:56 AM
by: ದ ರೂರಲ್ ಮಿರರ್.ಕಾಂ
ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
June 27, 2025
6:38 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ
June 27, 2025
6:31 AM
by: ದ ರೂರಲ್ ಮಿರರ್.ಕಾಂ
ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ
June 27, 2025
6:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group