ಬೆಳ್ಳಾರೆ: ಕುಕ್ಕೆ ಸುಬ್ರಹ್ಮಣ್ಯದ ಮುಂಭಾಗಿಲದಲ್ಲಿ ಇರುವ ಲೋಹ ಪರಿಶೋಧಕ ಯಂತ್ರ ಕಳೆದ ಹಲವು ದಿನಗಳಿಂದ ಕೆಟ್ಟು ಹೋಗಿದ್ದು, ದೇವಸ್ಥಾನದ ಹೊರಾಂಗಣದಲ್ಲಿಯೂ ಸಿಸಿ ಟಿವಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದೆಲ್ಲವೂ ಭದ್ರತೆ ಹಾಗು ಸುರಕ್ಷತೆಯ ಲೋಪವಾಗಿದೆ. ಇದನ್ನು ಗಮನಿಸಿ ಕೂಡಲೆ ವ್ಯವಸ್ಥೆ ಸರಿಪಡಿಸಿಕೊಡಬೇಕೆಂದು ಆಗ್ರಹಿಸಿ ರಾಜ್ಯ ಅಪರಾಧ ನಿಗ್ರಹ ದಳದ ವತಿಯಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರಿಗೆ ಲಿಖಿತ ಮನವಿ ಸಲ್ಲಿಸಲಾಯಿತು.
ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಮನವಿದಾರರಿಗೆ ಭರವಸೆ ನೀಡಿದರು. ಅಪರಾಧ ನಿಗ್ರಹ ದಳದ ರಾಜ್ಯಾಧ್ಯಕ್ಷ ಪ್ರವೀಣ ರೈ ಮರುವಂಜ, ಜಿಲ್ಲಾಧ್ಯಕ್ಷ ರಾಜಾರಾಂ ಭಟ್ ಎಡಕ್ಕಾನ, ಮೈಸೂರು ವಿಭಾಗದ ಗೀತಾ ಮುತ್ತಪ್ಪ, ತುಳುನಾಡು ರಕ್ಷಣಾ ವೇದಿಕೆಯ ಸುರೇಶ್ ಉಜಿರಡ್ಕ, ಎನ್.ಎಸ್.ಯು.ಐ ಸುಳ್ಯ ಘಟಕ ಅಧ್ಯಕ್ಷ ಪವನ್ ರೈ ಮರುವಂಜ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…