ಬೆಳ್ಳಾರೆ: ಕುಕ್ಕೆ ಸುಬ್ರಹ್ಮಣ್ಯದ ಮುಂಭಾಗಿಲದಲ್ಲಿ ಇರುವ ಲೋಹ ಪರಿಶೋಧಕ ಯಂತ್ರ ಕಳೆದ ಹಲವು ದಿನಗಳಿಂದ ಕೆಟ್ಟು ಹೋಗಿದ್ದು, ದೇವಸ್ಥಾನದ ಹೊರಾಂಗಣದಲ್ಲಿಯೂ ಸಿಸಿ ಟಿವಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದೆಲ್ಲವೂ ಭದ್ರತೆ ಹಾಗು ಸುರಕ್ಷತೆಯ ಲೋಪವಾಗಿದೆ. ಇದನ್ನು ಗಮನಿಸಿ ಕೂಡಲೆ ವ್ಯವಸ್ಥೆ ಸರಿಪಡಿಸಿಕೊಡಬೇಕೆಂದು ಆಗ್ರಹಿಸಿ ರಾಜ್ಯ ಅಪರಾಧ ನಿಗ್ರಹ ದಳದ ವತಿಯಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರಿಗೆ ಲಿಖಿತ ಮನವಿ ಸಲ್ಲಿಸಲಾಯಿತು.
ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಮನವಿದಾರರಿಗೆ ಭರವಸೆ ನೀಡಿದರು. ಅಪರಾಧ ನಿಗ್ರಹ ದಳದ ರಾಜ್ಯಾಧ್ಯಕ್ಷ ಪ್ರವೀಣ ರೈ ಮರುವಂಜ, ಜಿಲ್ಲಾಧ್ಯಕ್ಷ ರಾಜಾರಾಂ ಭಟ್ ಎಡಕ್ಕಾನ, ಮೈಸೂರು ವಿಭಾಗದ ಗೀತಾ ಮುತ್ತಪ್ಪ, ತುಳುನಾಡು ರಕ್ಷಣಾ ವೇದಿಕೆಯ ಸುರೇಶ್ ಉಜಿರಡ್ಕ, ಎನ್.ಎಸ್.ಯು.ಐ ಸುಳ್ಯ ಘಟಕ ಅಧ್ಯಕ್ಷ ಪವನ್ ರೈ ಮರುವಂಜ ಉಪಸ್ಥಿತರಿದ್ದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…