ಬೆಳ್ಳಾರೆ: ಕುಕ್ಕೆ ಸುಬ್ರಹ್ಮಣ್ಯದ ಮುಂಭಾಗಿಲದಲ್ಲಿ ಇರುವ ಲೋಹ ಪರಿಶೋಧಕ ಯಂತ್ರ ಕಳೆದ ಹಲವು ದಿನಗಳಿಂದ ಕೆಟ್ಟು ಹೋಗಿದ್ದು, ದೇವಸ್ಥಾನದ ಹೊರಾಂಗಣದಲ್ಲಿಯೂ ಸಿಸಿ ಟಿವಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದೆಲ್ಲವೂ ಭದ್ರತೆ ಹಾಗು ಸುರಕ್ಷತೆಯ ಲೋಪವಾಗಿದೆ. ಇದನ್ನು ಗಮನಿಸಿ ಕೂಡಲೆ ವ್ಯವಸ್ಥೆ ಸರಿಪಡಿಸಿಕೊಡಬೇಕೆಂದು ಆಗ್ರಹಿಸಿ ರಾಜ್ಯ ಅಪರಾಧ ನಿಗ್ರಹ ದಳದ ವತಿಯಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರಿಗೆ ಲಿಖಿತ ಮನವಿ ಸಲ್ಲಿಸಲಾಯಿತು.
ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಮನವಿದಾರರಿಗೆ ಭರವಸೆ ನೀಡಿದರು. ಅಪರಾಧ ನಿಗ್ರಹ ದಳದ ರಾಜ್ಯಾಧ್ಯಕ್ಷ ಪ್ರವೀಣ ರೈ ಮರುವಂಜ, ಜಿಲ್ಲಾಧ್ಯಕ್ಷ ರಾಜಾರಾಂ ಭಟ್ ಎಡಕ್ಕಾನ, ಮೈಸೂರು ವಿಭಾಗದ ಗೀತಾ ಮುತ್ತಪ್ಪ, ತುಳುನಾಡು ರಕ್ಷಣಾ ವೇದಿಕೆಯ ಸುರೇಶ್ ಉಜಿರಡ್ಕ, ಎನ್.ಎಸ್.ಯು.ಐ ಸುಳ್ಯ ಘಟಕ ಅಧ್ಯಕ್ಷ ಪವನ್ ರೈ ಮರುವಂಜ ಉಪಸ್ಥಿತರಿದ್ದರು.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…