ಬೆಳ್ಳಾರೆ: ಕುಕ್ಕೆ ಸುಬ್ರಹ್ಮಣ್ಯದ ಮುಂಭಾಗಿಲದಲ್ಲಿ ಇರುವ ಲೋಹ ಪರಿಶೋಧಕ ಯಂತ್ರ ಕಳೆದ ಹಲವು ದಿನಗಳಿಂದ ಕೆಟ್ಟು ಹೋಗಿದ್ದು, ದೇವಸ್ಥಾನದ ಹೊರಾಂಗಣದಲ್ಲಿಯೂ ಸಿಸಿ ಟಿವಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದೆಲ್ಲವೂ ಭದ್ರತೆ ಹಾಗು ಸುರಕ್ಷತೆಯ ಲೋಪವಾಗಿದೆ. ಇದನ್ನು ಗಮನಿಸಿ ಕೂಡಲೆ ವ್ಯವಸ್ಥೆ ಸರಿಪಡಿಸಿಕೊಡಬೇಕೆಂದು ಆಗ್ರಹಿಸಿ ರಾಜ್ಯ ಅಪರಾಧ ನಿಗ್ರಹ ದಳದ ವತಿಯಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರಿಗೆ ಲಿಖಿತ ಮನವಿ ಸಲ್ಲಿಸಲಾಯಿತು.
ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಮನವಿದಾರರಿಗೆ ಭರವಸೆ ನೀಡಿದರು. ಅಪರಾಧ ನಿಗ್ರಹ ದಳದ ರಾಜ್ಯಾಧ್ಯಕ್ಷ ಪ್ರವೀಣ ರೈ ಮರುವಂಜ, ಜಿಲ್ಲಾಧ್ಯಕ್ಷ ರಾಜಾರಾಂ ಭಟ್ ಎಡಕ್ಕಾನ, ಮೈಸೂರು ವಿಭಾಗದ ಗೀತಾ ಮುತ್ತಪ್ಪ, ತುಳುನಾಡು ರಕ್ಷಣಾ ವೇದಿಕೆಯ ಸುರೇಶ್ ಉಜಿರಡ್ಕ, ಎನ್.ಎಸ್.ಯು.ಐ ಸುಳ್ಯ ಘಟಕ ಅಧ್ಯಕ್ಷ ಪವನ್ ರೈ ಮರುವಂಜ ಉಪಸ್ಥಿತರಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…