ಬೆಳ್ಳಾರೆ: ಕುಕ್ಕೆ ಸುಬ್ರಹ್ಮಣ್ಯದ ಮುಂಭಾಗಿಲದಲ್ಲಿ ಇರುವ ಲೋಹ ಪರಿಶೋಧಕ ಯಂತ್ರ ಕಳೆದ ಹಲವು ದಿನಗಳಿಂದ ಕೆಟ್ಟು ಹೋಗಿದ್ದು, ದೇವಸ್ಥಾನದ ಹೊರಾಂಗಣದಲ್ಲಿಯೂ ಸಿಸಿ ಟಿವಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದೆಲ್ಲವೂ ಭದ್ರತೆ ಹಾಗು ಸುರಕ್ಷತೆಯ ಲೋಪವಾಗಿದೆ. ಇದನ್ನು ಗಮನಿಸಿ ಕೂಡಲೆ ವ್ಯವಸ್ಥೆ ಸರಿಪಡಿಸಿಕೊಡಬೇಕೆಂದು ಆಗ್ರಹಿಸಿ ರಾಜ್ಯ ಅಪರಾಧ ನಿಗ್ರಹ ದಳದ ವತಿಯಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರಿಗೆ ಲಿಖಿತ ಮನವಿ ಸಲ್ಲಿಸಲಾಯಿತು.
ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಮನವಿದಾರರಿಗೆ ಭರವಸೆ ನೀಡಿದರು. ಅಪರಾಧ ನಿಗ್ರಹ ದಳದ ರಾಜ್ಯಾಧ್ಯಕ್ಷ ಪ್ರವೀಣ ರೈ ಮರುವಂಜ, ಜಿಲ್ಲಾಧ್ಯಕ್ಷ ರಾಜಾರಾಂ ಭಟ್ ಎಡಕ್ಕಾನ, ಮೈಸೂರು ವಿಭಾಗದ ಗೀತಾ ಮುತ್ತಪ್ಪ, ತುಳುನಾಡು ರಕ್ಷಣಾ ವೇದಿಕೆಯ ಸುರೇಶ್ ಉಜಿರಡ್ಕ, ಎನ್.ಎಸ್.ಯು.ಐ ಸುಳ್ಯ ಘಟಕ ಅಧ್ಯಕ್ಷ ಪವನ್ ರೈ ಮರುವಂಜ ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…