ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿಗೆ ಅಸೌಖ್ಯ ಹಿನ್ನೆಲೆ : ತಾಂಬೂಲ ಪ್ರಶ್ನೆ ಚಿಂತನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಅಸೌಖ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಗಜಲಕ್ಷ್ಮಿ 16 ರ ವಯಸ್ಸಿನ ಯಶಸ್ವಿ ಆನೆಯ ಆರೋಗ್ಯ ಚೇತರಿಕೆಗೆ ಮತ್ತು ಚಿಕಿತ್ಸೆ ಫಲಿಸಲು ಪ್ರೇರಣೆ ಮತ್ತು ದೀರ್ಘಾಯುಷ್ಯಕ್ಕೆ ಭಗವಂತನ ಅನುಗ್ರಹ ಪ್ರಾರ್ಥಿಸಿ ದೇಗುಲದಲ್ಲಿ ಮಹಾಪೂಜೆ ನಡೆಸುವುದು, ಗ್ರಾಮ ದೇವರಾದ ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನದಲ್ಲಿ ಅಭಿಷೇಕ. ಆನೆಶೆಡ್‍ನಲ್ಲಿ ವಾಸ್ತುಹೋಮ. ಸುದರ್ಶನ ಹೋಮ ನಡೆಸಲು ದೇಗುಲದಲ್ಲಿ ಬುಧವಾರ ಇರಿಸಲಾದ ಪ್ರಶ್ನೆ ಚಿಂತನೆಯಲ್ಲಿ ದೈವಜ್ಞರು ಪರಿಹಾರದ ಸಲಹೆ ನೀಡಿದ್ದಾರೆ.

Advertisement
Advertisement

ದೇಗುಲದ ಆನೆ ಯಶಸ್ವಿ ಅಸೌಖ್ಯಗೊಂಡ ಹಿನ್ನಲೆಯಲ್ಲಿ ಧಾರ್ಮಿಕ ಚಿಂತನೆಗಳ ಮೂಲಕ ಏನಾದರೂ ದೋಷಗಳು ಇವೆಯೇ ಎಂಬ ಕುರಿತು ಬುಧವಾರ ದೇಗುಲದಲ್ಲಿ ರಾಜೇಂದ್ರ ಭಟ್ ನೆಟ್ಟಾರು ಮೂಲಕ ತಾಂಬೂಲ ಪ್ರಶ್ನೆ ಚಿಂತನೆಯನ್ನು ಇರಿಸಲಾಯಿತು. ಈ ವೇಳೆ ದೈವಜ್ಞರು ಆನೆಗೆ ಕರುಳು ಮತ್ತು ಮೂತ್ರಕೋಶಕ್ಕೆ ಸಂಬಂದಿಸಿ ಸಮಸ್ಯೆಯಿದೆ. ಆನೆಯನ್ನು ನೋಡಿಕೊಳ್ಳುತ್ತಿರುವ ಮಾವುತರ ನಡುವೆ ಹೊಂದಾಣಿಕೆ ಕೊರತೆಯಿಂದ ಆನೆಯ ನಿರ್ವಹಣೆಯಲ್ಲಿ ಸಮಸ್ಯೆಗಳಾಗಿವೆ. ಆನೆಗೆ ಪ್ರತಿನಿತ್ಯ ಸೂಕ್ತವಾದ ವ್ಯಾಯಾಮ. ಯೋಗ, ಆಹಾರ ಪದ್ಧತಿಗಳ ವಿಚಾರದಲ್ಲಿ ನಿರ್ಲಕ್ಷ ವಹಿಸಿದ್ದರಿಂದ ಆನೆಯು ಆರೋಗ್ಯದ ಮೇಲೆ ಪರಿಣಾಮ ಬಿದ್ದಿರುವ ಬಗ್ಗೆ ಕಂಡುಬರುತ್ತಿದೆ. ಯಶಸ್ವಿಗೆ ಶನಿದೋಷ ಕೂಡ ಇದ್ದು ಅದು ಮುಂದಿನ ಆರು ತಿಂಗಳುಗಳ ಕಾಲ ಇರುತ್ತದೆ. ಹೀಗಾಗಿ ದೀರ್ಘ ಅವಧಿ ಚಿಕಿತ್ಸೆ ನೀಡಬೇಕಾಗುತ್ತದೆ. ಚೇತರಿಕೆಗೂ ಸಮಯ ತೆಗೆದುಕೊಳ್ಳಲಿದೆ ಎಂದಿದ್ದಾರೆ.

ಆನೆಶೆಡ್ ವಾಸ್ತು ಸಮಸ್ಯೆ ಕೂಡ ಇದ್ದು ವಾಸ್ತು ಹೋಮ ಅಗತ್ಯವಾಗಿ ನಡೆಸಬೇಕಿದೆ. ಆನೆಗೆ ಇನ್ನು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎನ್ನುವ ವಿಚಾರಗಳು ಪ್ರಶ್ನೆ ಚಿಂತನೆಯಲ್ಲಿ ಕಂಡು ಬರುತ್ತಿರುವ ಕಾರಣ ಆಡಳಿತ ಮಂಡಳಿ ಪ್ರಶ್ನೆಯಲ್ಲಿ ಕಂಡು ಬಂದ ವಿಚಾರಗಳಿಗೆ ಸಂಬಂದಿಸಿ ನೀಡಲಾದ ಪರಿಹಾರ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದ್ದಾರೆ. ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಎಲ್ಲ ಪರಿಹಾರ ಮಾರ್ಗಗಳನ್ನು ಶೀಘ್ರ ನಡೆಸಲಿದ್ದೇವೆ. ಆನೆಯ ಆರೋಗ್ಯ ಸುಧಾರಣೆಗೆ ಬೇಕಿರುವ ಎಲ್ಲ ವ್ಯವಸ್ಥೆಗಳನ್ನು ದೇಗುಲದ ಕಡೆಯಿಂದ ಮಾಡಲಾಗುತ್ತದೆ ಎಂದು ಪ್ರಶ್ನೆ ಚಿಂತನೆ ಬಳಿಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದರು.

 

ತಾಂಬೂಲ ಪ್ರಶ್ನೆ ಚಿಂತನೆ ವೇಳೆ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ. ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ.ಎಚ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ಮಹೇಶ್‍ಕುಮಾರ್ ಕರಿಕ್ಕಳ, ರಾಜೀವಿ ಆರ್ ರೈ, ಮಾಧವ ಡಿ, ದೇಗುಲದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಪಶುವೈದ್ಯ ಡಾ ವೆಂಕಟಾಚಲಪತಿ ಹಾಗೂ ಊರ ಭಕ್ತರು ಉಪಸ್ಥಿತರಿದ್ದರು.

Advertisement

ಚಿಕಿತ್ಸೆ ಮುಂದುವರಿಕೆ:
ಆನೆ ಯಶಸ್ವಿಯ ಆರೋಗ್ಯ ಯಥಾಸ್ಥಿತಿಯಲ್ಲಿದ್ದು ಚಿಕಿತ್ಸೆ ಮುಂದುವರೆದಿದೆ. ಮೈಸೂರಿನ ತಜ್ಞ ವೈದ್ಯ ಶ್ರೀನಿವಾಸ ಮಂಗಳವಾರ ಸಂಜೆ ಆನೆಯ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಬಳಿಕ ಆನೆಗೆ ವ್ಯಾಯಾಮ ಮಾಡಿಸಲು ಶೆಡ್‍ನಿಂದ ಹೊರಗೆ ಕರೆತಂದು ಓಡಾಡಿಸಿದ್ದಾರೆ. ನಿತ್ಯವೂ ಆನೆಗೆ ವ್ಯಾಯಾಮ ಯೋಗ ಮಾಡಿಸುವಂತೆ ಮಾವುತರಿಗೆ ಮಾರ್ಗದರ್ಶನ ನೀಡಿದ್ದಾರೆ. ಜತೆಗೆ ಅನಾರೋಗ್ಯಕ್ಕೆ ಸಂಬಂದಿಸಿ ಆನೆಗೆ ಚಿಕಿತ್ಸೆ ನೀಡುತ್ತಿರುವ ಗುತ್ತಿಗಾರಿನ ಪಶುವೈದ್ಯ ಡಾ. ವೆಂಕಟಾಚಲಪತಿ ಚಿಕಿತ್ಸೆ ಮುಂದುವರೆಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

5 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

6 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

6 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

15 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

17 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

19 hours ago