Advertisement
ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿಗೆ ಅಸೌಖ್ಯ ಹಿನ್ನೆಲೆ : ತಾಂಬೂಲ ಪ್ರಶ್ನೆ ಚಿಂತನೆ

Share

ಸುಬ್ರಹ್ಮಣ್ಯ: ಅಸೌಖ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಗಜಲಕ್ಷ್ಮಿ 16 ರ ವಯಸ್ಸಿನ ಯಶಸ್ವಿ ಆನೆಯ ಆರೋಗ್ಯ ಚೇತರಿಕೆಗೆ ಮತ್ತು ಚಿಕಿತ್ಸೆ ಫಲಿಸಲು ಪ್ರೇರಣೆ ಮತ್ತು ದೀರ್ಘಾಯುಷ್ಯಕ್ಕೆ ಭಗವಂತನ ಅನುಗ್ರಹ ಪ್ರಾರ್ಥಿಸಿ ದೇಗುಲದಲ್ಲಿ ಮಹಾಪೂಜೆ ನಡೆಸುವುದು, ಗ್ರಾಮ ದೇವರಾದ ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನದಲ್ಲಿ ಅಭಿಷೇಕ. ಆನೆಶೆಡ್‍ನಲ್ಲಿ ವಾಸ್ತುಹೋಮ. ಸುದರ್ಶನ ಹೋಮ ನಡೆಸಲು ದೇಗುಲದಲ್ಲಿ ಬುಧವಾರ ಇರಿಸಲಾದ ಪ್ರಶ್ನೆ ಚಿಂತನೆಯಲ್ಲಿ ದೈವಜ್ಞರು ಪರಿಹಾರದ ಸಲಹೆ ನೀಡಿದ್ದಾರೆ.

ದೇಗುಲದ ಆನೆ ಯಶಸ್ವಿ ಅಸೌಖ್ಯಗೊಂಡ ಹಿನ್ನಲೆಯಲ್ಲಿ ಧಾರ್ಮಿಕ ಚಿಂತನೆಗಳ ಮೂಲಕ ಏನಾದರೂ ದೋಷಗಳು ಇವೆಯೇ ಎಂಬ ಕುರಿತು ಬುಧವಾರ ದೇಗುಲದಲ್ಲಿ ರಾಜೇಂದ್ರ ಭಟ್ ನೆಟ್ಟಾರು ಮೂಲಕ ತಾಂಬೂಲ ಪ್ರಶ್ನೆ ಚಿಂತನೆಯನ್ನು ಇರಿಸಲಾಯಿತು. ಈ ವೇಳೆ ದೈವಜ್ಞರು ಆನೆಗೆ ಕರುಳು ಮತ್ತು ಮೂತ್ರಕೋಶಕ್ಕೆ ಸಂಬಂದಿಸಿ ಸಮಸ್ಯೆಯಿದೆ. ಆನೆಯನ್ನು ನೋಡಿಕೊಳ್ಳುತ್ತಿರುವ ಮಾವುತರ ನಡುವೆ ಹೊಂದಾಣಿಕೆ ಕೊರತೆಯಿಂದ ಆನೆಯ ನಿರ್ವಹಣೆಯಲ್ಲಿ ಸಮಸ್ಯೆಗಳಾಗಿವೆ. ಆನೆಗೆ ಪ್ರತಿನಿತ್ಯ ಸೂಕ್ತವಾದ ವ್ಯಾಯಾಮ. ಯೋಗ, ಆಹಾರ ಪದ್ಧತಿಗಳ ವಿಚಾರದಲ್ಲಿ ನಿರ್ಲಕ್ಷ ವಹಿಸಿದ್ದರಿಂದ ಆನೆಯು ಆರೋಗ್ಯದ ಮೇಲೆ ಪರಿಣಾಮ ಬಿದ್ದಿರುವ ಬಗ್ಗೆ ಕಂಡುಬರುತ್ತಿದೆ. ಯಶಸ್ವಿಗೆ ಶನಿದೋಷ ಕೂಡ ಇದ್ದು ಅದು ಮುಂದಿನ ಆರು ತಿಂಗಳುಗಳ ಕಾಲ ಇರುತ್ತದೆ. ಹೀಗಾಗಿ ದೀರ್ಘ ಅವಧಿ ಚಿಕಿತ್ಸೆ ನೀಡಬೇಕಾಗುತ್ತದೆ. ಚೇತರಿಕೆಗೂ ಸಮಯ ತೆಗೆದುಕೊಳ್ಳಲಿದೆ ಎಂದಿದ್ದಾರೆ.

Advertisement

ಆನೆಶೆಡ್ ವಾಸ್ತು ಸಮಸ್ಯೆ ಕೂಡ ಇದ್ದು ವಾಸ್ತು ಹೋಮ ಅಗತ್ಯವಾಗಿ ನಡೆಸಬೇಕಿದೆ. ಆನೆಗೆ ಇನ್ನು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎನ್ನುವ ವಿಚಾರಗಳು ಪ್ರಶ್ನೆ ಚಿಂತನೆಯಲ್ಲಿ ಕಂಡು ಬರುತ್ತಿರುವ ಕಾರಣ ಆಡಳಿತ ಮಂಡಳಿ ಪ್ರಶ್ನೆಯಲ್ಲಿ ಕಂಡು ಬಂದ ವಿಚಾರಗಳಿಗೆ ಸಂಬಂದಿಸಿ ನೀಡಲಾದ ಪರಿಹಾರ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದ್ದಾರೆ. ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಎಲ್ಲ ಪರಿಹಾರ ಮಾರ್ಗಗಳನ್ನು ಶೀಘ್ರ ನಡೆಸಲಿದ್ದೇವೆ. ಆನೆಯ ಆರೋಗ್ಯ ಸುಧಾರಣೆಗೆ ಬೇಕಿರುವ ಎಲ್ಲ ವ್ಯವಸ್ಥೆಗಳನ್ನು ದೇಗುಲದ ಕಡೆಯಿಂದ ಮಾಡಲಾಗುತ್ತದೆ ಎಂದು ಪ್ರಶ್ನೆ ಚಿಂತನೆ ಬಳಿಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದರು.

 

Advertisement

ತಾಂಬೂಲ ಪ್ರಶ್ನೆ ಚಿಂತನೆ ವೇಳೆ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ. ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ.ಎಚ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ಮಹೇಶ್‍ಕುಮಾರ್ ಕರಿಕ್ಕಳ, ರಾಜೀವಿ ಆರ್ ರೈ, ಮಾಧವ ಡಿ, ದೇಗುಲದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಪಶುವೈದ್ಯ ಡಾ ವೆಂಕಟಾಚಲಪತಿ ಹಾಗೂ ಊರ ಭಕ್ತರು ಉಪಸ್ಥಿತರಿದ್ದರು.

ಚಿಕಿತ್ಸೆ ಮುಂದುವರಿಕೆ:
ಆನೆ ಯಶಸ್ವಿಯ ಆರೋಗ್ಯ ಯಥಾಸ್ಥಿತಿಯಲ್ಲಿದ್ದು ಚಿಕಿತ್ಸೆ ಮುಂದುವರೆದಿದೆ. ಮೈಸೂರಿನ ತಜ್ಞ ವೈದ್ಯ ಶ್ರೀನಿವಾಸ ಮಂಗಳವಾರ ಸಂಜೆ ಆನೆಯ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಬಳಿಕ ಆನೆಗೆ ವ್ಯಾಯಾಮ ಮಾಡಿಸಲು ಶೆಡ್‍ನಿಂದ ಹೊರಗೆ ಕರೆತಂದು ಓಡಾಡಿಸಿದ್ದಾರೆ. ನಿತ್ಯವೂ ಆನೆಗೆ ವ್ಯಾಯಾಮ ಯೋಗ ಮಾಡಿಸುವಂತೆ ಮಾವುತರಿಗೆ ಮಾರ್ಗದರ್ಶನ ನೀಡಿದ್ದಾರೆ. ಜತೆಗೆ ಅನಾರೋಗ್ಯಕ್ಕೆ ಸಂಬಂದಿಸಿ ಆನೆಗೆ ಚಿಕಿತ್ಸೆ ನೀಡುತ್ತಿರುವ ಗುತ್ತಿಗಾರಿನ ಪಶುವೈದ್ಯ ಡಾ. ವೆಂಕಟಾಚಲಪತಿ ಚಿಕಿತ್ಸೆ ಮುಂದುವರೆಸಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago