Advertisement
ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿಗೆ ಅಸೌಖ್ಯ ಹಿನ್ನೆಲೆ : ತಾಂಬೂಲ ಪ್ರಶ್ನೆ ಚಿಂತನೆ

Share

ಸುಬ್ರಹ್ಮಣ್ಯ: ಅಸೌಖ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಗಜಲಕ್ಷ್ಮಿ 16 ರ ವಯಸ್ಸಿನ ಯಶಸ್ವಿ ಆನೆಯ ಆರೋಗ್ಯ ಚೇತರಿಕೆಗೆ ಮತ್ತು ಚಿಕಿತ್ಸೆ ಫಲಿಸಲು ಪ್ರೇರಣೆ ಮತ್ತು ದೀರ್ಘಾಯುಷ್ಯಕ್ಕೆ ಭಗವಂತನ ಅನುಗ್ರಹ ಪ್ರಾರ್ಥಿಸಿ ದೇಗುಲದಲ್ಲಿ ಮಹಾಪೂಜೆ ನಡೆಸುವುದು, ಗ್ರಾಮ ದೇವರಾದ ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನದಲ್ಲಿ ಅಭಿಷೇಕ. ಆನೆಶೆಡ್‍ನಲ್ಲಿ ವಾಸ್ತುಹೋಮ. ಸುದರ್ಶನ ಹೋಮ ನಡೆಸಲು ದೇಗುಲದಲ್ಲಿ ಬುಧವಾರ ಇರಿಸಲಾದ ಪ್ರಶ್ನೆ ಚಿಂತನೆಯಲ್ಲಿ ದೈವಜ್ಞರು ಪರಿಹಾರದ ಸಲಹೆ ನೀಡಿದ್ದಾರೆ.

ದೇಗುಲದ ಆನೆ ಯಶಸ್ವಿ ಅಸೌಖ್ಯಗೊಂಡ ಹಿನ್ನಲೆಯಲ್ಲಿ ಧಾರ್ಮಿಕ ಚಿಂತನೆಗಳ ಮೂಲಕ ಏನಾದರೂ ದೋಷಗಳು ಇವೆಯೇ ಎಂಬ ಕುರಿತು ಬುಧವಾರ ದೇಗುಲದಲ್ಲಿ ರಾಜೇಂದ್ರ ಭಟ್ ನೆಟ್ಟಾರು ಮೂಲಕ ತಾಂಬೂಲ ಪ್ರಶ್ನೆ ಚಿಂತನೆಯನ್ನು ಇರಿಸಲಾಯಿತು. ಈ ವೇಳೆ ದೈವಜ್ಞರು ಆನೆಗೆ ಕರುಳು ಮತ್ತು ಮೂತ್ರಕೋಶಕ್ಕೆ ಸಂಬಂದಿಸಿ ಸಮಸ್ಯೆಯಿದೆ. ಆನೆಯನ್ನು ನೋಡಿಕೊಳ್ಳುತ್ತಿರುವ ಮಾವುತರ ನಡುವೆ ಹೊಂದಾಣಿಕೆ ಕೊರತೆಯಿಂದ ಆನೆಯ ನಿರ್ವಹಣೆಯಲ್ಲಿ ಸಮಸ್ಯೆಗಳಾಗಿವೆ. ಆನೆಗೆ ಪ್ರತಿನಿತ್ಯ ಸೂಕ್ತವಾದ ವ್ಯಾಯಾಮ. ಯೋಗ, ಆಹಾರ ಪದ್ಧತಿಗಳ ವಿಚಾರದಲ್ಲಿ ನಿರ್ಲಕ್ಷ ವಹಿಸಿದ್ದರಿಂದ ಆನೆಯು ಆರೋಗ್ಯದ ಮೇಲೆ ಪರಿಣಾಮ ಬಿದ್ದಿರುವ ಬಗ್ಗೆ ಕಂಡುಬರುತ್ತಿದೆ. ಯಶಸ್ವಿಗೆ ಶನಿದೋಷ ಕೂಡ ಇದ್ದು ಅದು ಮುಂದಿನ ಆರು ತಿಂಗಳುಗಳ ಕಾಲ ಇರುತ್ತದೆ. ಹೀಗಾಗಿ ದೀರ್ಘ ಅವಧಿ ಚಿಕಿತ್ಸೆ ನೀಡಬೇಕಾಗುತ್ತದೆ. ಚೇತರಿಕೆಗೂ ಸಮಯ ತೆಗೆದುಕೊಳ್ಳಲಿದೆ ಎಂದಿದ್ದಾರೆ.

ಆನೆಶೆಡ್ ವಾಸ್ತು ಸಮಸ್ಯೆ ಕೂಡ ಇದ್ದು ವಾಸ್ತು ಹೋಮ ಅಗತ್ಯವಾಗಿ ನಡೆಸಬೇಕಿದೆ. ಆನೆಗೆ ಇನ್ನು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎನ್ನುವ ವಿಚಾರಗಳು ಪ್ರಶ್ನೆ ಚಿಂತನೆಯಲ್ಲಿ ಕಂಡು ಬರುತ್ತಿರುವ ಕಾರಣ ಆಡಳಿತ ಮಂಡಳಿ ಪ್ರಶ್ನೆಯಲ್ಲಿ ಕಂಡು ಬಂದ ವಿಚಾರಗಳಿಗೆ ಸಂಬಂದಿಸಿ ನೀಡಲಾದ ಪರಿಹಾರ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದ್ದಾರೆ. ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಎಲ್ಲ ಪರಿಹಾರ ಮಾರ್ಗಗಳನ್ನು ಶೀಘ್ರ ನಡೆಸಲಿದ್ದೇವೆ. ಆನೆಯ ಆರೋಗ್ಯ ಸುಧಾರಣೆಗೆ ಬೇಕಿರುವ ಎಲ್ಲ ವ್ಯವಸ್ಥೆಗಳನ್ನು ದೇಗುಲದ ಕಡೆಯಿಂದ ಮಾಡಲಾಗುತ್ತದೆ ಎಂದು ಪ್ರಶ್ನೆ ಚಿಂತನೆ ಬಳಿಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದರು.

 

ತಾಂಬೂಲ ಪ್ರಶ್ನೆ ಚಿಂತನೆ ವೇಳೆ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ. ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ.ಎಚ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ಮಹೇಶ್‍ಕುಮಾರ್ ಕರಿಕ್ಕಳ, ರಾಜೀವಿ ಆರ್ ರೈ, ಮಾಧವ ಡಿ, ದೇಗುಲದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಪಶುವೈದ್ಯ ಡಾ ವೆಂಕಟಾಚಲಪತಿ ಹಾಗೂ ಊರ ಭಕ್ತರು ಉಪಸ್ಥಿತರಿದ್ದರು.

ಚಿಕಿತ್ಸೆ ಮುಂದುವರಿಕೆ:
ಆನೆ ಯಶಸ್ವಿಯ ಆರೋಗ್ಯ ಯಥಾಸ್ಥಿತಿಯಲ್ಲಿದ್ದು ಚಿಕಿತ್ಸೆ ಮುಂದುವರೆದಿದೆ. ಮೈಸೂರಿನ ತಜ್ಞ ವೈದ್ಯ ಶ್ರೀನಿವಾಸ ಮಂಗಳವಾರ ಸಂಜೆ ಆನೆಯ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಬಳಿಕ ಆನೆಗೆ ವ್ಯಾಯಾಮ ಮಾಡಿಸಲು ಶೆಡ್‍ನಿಂದ ಹೊರಗೆ ಕರೆತಂದು ಓಡಾಡಿಸಿದ್ದಾರೆ. ನಿತ್ಯವೂ ಆನೆಗೆ ವ್ಯಾಯಾಮ ಯೋಗ ಮಾಡಿಸುವಂತೆ ಮಾವುತರಿಗೆ ಮಾರ್ಗದರ್ಶನ ನೀಡಿದ್ದಾರೆ. ಜತೆಗೆ ಅನಾರೋಗ್ಯಕ್ಕೆ ಸಂಬಂದಿಸಿ ಆನೆಗೆ ಚಿಕಿತ್ಸೆ ನೀಡುತ್ತಿರುವ ಗುತ್ತಿಗಾರಿನ ಪಶುವೈದ್ಯ ಡಾ. ವೆಂಕಟಾಚಲಪತಿ ಚಿಕಿತ್ಸೆ ಮುಂದುವರೆಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

12 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

19 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago