ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದ ಆದಾಯ 92.09. ಕೋಟಿ ರೂ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಈ ಸಾಲಿನ ವಾರ್ಷಿಕ ಆದಾಯ 92.09  ಕೋಟಿ  ರೂ ಆಗಿದೆ. ಕಳೆದ ವರ್ಷಕ್ಕಿಂತ ಸುಮಾರು 3.8 ಕೋಟಿ ರೂಪಾಯಿ ಕಡಿಮೆ ಇದೆ.

Advertisement

ಕಳೆದ ಆರ್ಥಿಕ ವರ್ಷ 2017-18ನೇ ಸಾಲಿನಲ್ಲಿ ದೇಗುಲವು 95.92 ಕೋಟಿ ರೂ ಸೇವಾ ರೂಪದ ಹಣ ಬಂದಿತ್ತು. ದೇಗುಲಕ್ಕೆ ಹರಕೆ ಸೇವೆ, ಕಾಣಿಕೆ ಡಬ್ಬಿ, ಛತ್ರಗಳ ಬಾಡಿಗೆ ಮತ್ತು ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಆದಾಯ ಬರುತ್ತದೆ. ಸರ್ಪಸಂಸ್ಕಾರ ಹರಕೆ, ಬ್ರಹ್ಮರಥ ಸೇವೆ, ಆಶ್ಲೇಷ ಬಲಿ ಸೇವೆಗಳ ಜತೆಗೆ ತುಲಾಭಾರ, ಶೇಷಸೇವೆ, ಪಂಚಾಮೃತ, ಮಹಾಭಿಷೇಕ ಇತ್ಯಾದಿ ಸೇವೆಗಳಲ್ಲಿನ ಏರಿಕೆ ಇತ್ತು.

ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ 180 ಕೋಟಿ ರೂ ವೆಚ್ಚದ ಕಾಮಗಾರಿ ಪ್ರಗತಿ ಹಂತದಲ್ಲಿದೆ. ಕ್ಷೇತ್ರದ ರಸ್ತೆ ಅಭಿವೃದ್ಧಿಗೆ 68 ಕೋಟಿ ರೂ ಹಣವನ್ನು ಲೊಕೋಪಯೋಗಿ ಇಲಾಖೆಯಲ್ಲಿ ಠೇವಣಿ ಇರಿಸಲಾಗಿದೆ. ಇದು ಸೇರಿದಂತೆ ಭಕ್ತರ ಅನುಕೂಲತೆಗಾಗಿ 73 ಕೋಟಿ ರೂ ಅನ್ನು ಆಡಳಿತ ಮಂಡಳಿ ಠೇವಣಿಯಾಗಿ ಹೊಂದಿದೆ.

ಹಿಂದಿನ ಆರ್ಥಿಕ ವರ್ಷಗಳ ಪೈಕಿ 2006-07ರಲ್ಲಿ ದೇಗುಲದ ಆದಾಯ 19.76 ಕೋಟಿ ರೂ. 2007-08ರಲ್ಲಿ 24.44 ಕೋಟಿ ರೂ, 2008-09ರಲ್ಲಿ 31 ಕೋಟಿ ರೂ, 2009-10ರಲ್ಲಿ 38.51 ಕೋಟಿ ರೂ, 2011-12ರಲ್ಲಿ 56.24 ಕೋಟಿ ರೂ. 2012-13ರಲ್ಲಿ 66.76 ಕೋಟಿ ರೂ. 2013-14ರಲ್ಲಿ 68 ಕೋಟಿ ರೂ 2014-15ರಲ್ಲಿ 77.60 ಕೋಟಿ ರೂ 2015-16ರಲ್ಲಿ 88.83 ಕೋಟಿ ರೂ. 2016-17ರಲ್ಲಿ 89.65 ಕೋಟಿ ರೂ 2017-18ರಲ್ಲಿ 94.92 ಕೋ ರೂ ಆದಾಯ ಗಳಿಸಿತ್ತು. 2000ರ ವೇಳೆ ದೇಗುಲದ ಆದಾಯವೂ 8 ಕೋಟಿ ರೂ. ಗಳಿಷ್ಟಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

11 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

11 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

11 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

11 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

11 hours ago