ಸುಳ್ಯ/ಬಂಟ್ವಾಳ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಇದೀಗ ಬಿಸಿ ರೋಡ್ ದಾಟಿ ಮುಂದೆ ಬರುತ್ತಿದೆ. ಎಲ್ಲೆಡೆ ನೂತನ ಬ್ರಹ್ಮರಥಕ್ಕೆ ಅದ್ದೂರಿ ಸ್ವಾಗತ ನೀಡಲಾಗುತ್ತಿದೆ. ಭಕ್ತಾದಿಗಳು ಮೆರವಣಿಗೆ ಮೂಲಕ ನೂತನ ರಥಕ್ಕೆ ಸ್ವಾಗತ ಕೋರಿ ಸ್ವಾಗತಿಸುತ್ತಿದ್ದಾರೆ. ನೂತನ ರಥವು ಉಪ್ಪಿನಂಗಡಿ – ಕಡಬ ಮಾರ್ಗವಾಗಿ ಆಗಮಿಸಿ ಅ.2 ರಂದು ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ನೂತನ ಬ್ರಹ್ಮರಥ ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ. ಅದ್ದೂರಿಯಿಂದ ಸ್ವಾಗತಿಸಲು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಕುಮಾರಧಾರಾ ನದಿ ಬಳಿಯಿಂದ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಕುಮಾರಧಾರಾ ಬಳಿಯಿಂದ ರಸ್ತೆ ದುರಸ್ತಿ ಕಾರ್ಯ, ತೇಪೆ ಕಾರ್ಯ ನಡೆದಿದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…