ಸುಳ್ಯ/ಬಂಟ್ವಾಳ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಇದೀಗ ಬಿಸಿ ರೋಡ್ ದಾಟಿ ಮುಂದೆ ಬರುತ್ತಿದೆ. ಎಲ್ಲೆಡೆ ನೂತನ ಬ್ರಹ್ಮರಥಕ್ಕೆ ಅದ್ದೂರಿ ಸ್ವಾಗತ ನೀಡಲಾಗುತ್ತಿದೆ. ಭಕ್ತಾದಿಗಳು ಮೆರವಣಿಗೆ ಮೂಲಕ ನೂತನ ರಥಕ್ಕೆ ಸ್ವಾಗತ ಕೋರಿ ಸ್ವಾಗತಿಸುತ್ತಿದ್ದಾರೆ. ನೂತನ ರಥವು ಉಪ್ಪಿನಂಗಡಿ – ಕಡಬ ಮಾರ್ಗವಾಗಿ ಆಗಮಿಸಿ ಅ.2 ರಂದು ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ನೂತನ ಬ್ರಹ್ಮರಥ ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ. ಅದ್ದೂರಿಯಿಂದ ಸ್ವಾಗತಿಸಲು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಕುಮಾರಧಾರಾ ನದಿ ಬಳಿಯಿಂದ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಕುಮಾರಧಾರಾ ಬಳಿಯಿಂದ ರಸ್ತೆ ದುರಸ್ತಿ ಕಾರ್ಯ, ತೇಪೆ ಕಾರ್ಯ ನಡೆದಿದೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…