ಸುಳ್ಯ/ಬಂಟ್ವಾಳ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಇದೀಗ ಬಿಸಿ ರೋಡ್ ದಾಟಿ ಮುಂದೆ ಬರುತ್ತಿದೆ. ಎಲ್ಲೆಡೆ ನೂತನ ಬ್ರಹ್ಮರಥಕ್ಕೆ ಅದ್ದೂರಿ ಸ್ವಾಗತ ನೀಡಲಾಗುತ್ತಿದೆ. ಭಕ್ತಾದಿಗಳು ಮೆರವಣಿಗೆ ಮೂಲಕ ನೂತನ ರಥಕ್ಕೆ ಸ್ವಾಗತ ಕೋರಿ ಸ್ವಾಗತಿಸುತ್ತಿದ್ದಾರೆ. ನೂತನ ರಥವು ಉಪ್ಪಿನಂಗಡಿ – ಕಡಬ ಮಾರ್ಗವಾಗಿ ಆಗಮಿಸಿ ಅ.2 ರಂದು ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ನೂತನ ಬ್ರಹ್ಮರಥ ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ. ಅದ್ದೂರಿಯಿಂದ ಸ್ವಾಗತಿಸಲು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಕುಮಾರಧಾರಾ ನದಿ ಬಳಿಯಿಂದ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಕುಮಾರಧಾರಾ ಬಳಿಯಿಂದ ರಸ್ತೆ ದುರಸ್ತಿ ಕಾರ್ಯ, ತೇಪೆ ಕಾರ್ಯ ನಡೆದಿದೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…