ಸುಳ್ಯ/ಬಂಟ್ವಾಳ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಇದೀಗ ಬಿಸಿ ರೋಡ್ ದಾಟಿ ಮುಂದೆ ಬರುತ್ತಿದೆ. ಎಲ್ಲೆಡೆ ನೂತನ ಬ್ರಹ್ಮರಥಕ್ಕೆ ಅದ್ದೂರಿ ಸ್ವಾಗತ ನೀಡಲಾಗುತ್ತಿದೆ. ಭಕ್ತಾದಿಗಳು ಮೆರವಣಿಗೆ ಮೂಲಕ ನೂತನ ರಥಕ್ಕೆ ಸ್ವಾಗತ ಕೋರಿ ಸ್ವಾಗತಿಸುತ್ತಿದ್ದಾರೆ. ನೂತನ ರಥವು ಉಪ್ಪಿನಂಗಡಿ – ಕಡಬ ಮಾರ್ಗವಾಗಿ ಆಗಮಿಸಿ ಅ.2 ರಂದು ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ನೂತನ ಬ್ರಹ್ಮರಥ ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ. ಅದ್ದೂರಿಯಿಂದ ಸ್ವಾಗತಿಸಲು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಕುಮಾರಧಾರಾ ನದಿ ಬಳಿಯಿಂದ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಕುಮಾರಧಾರಾ ಬಳಿಯಿಂದ ರಸ್ತೆ ದುರಸ್ತಿ ಕಾರ್ಯ, ತೇಪೆ ಕಾರ್ಯ ನಡೆದಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…