ಸುಳ್ಯ/ಬಂಟ್ವಾಳ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಇದೀಗ ಬಿಸಿ ರೋಡ್ ದಾಟಿ ಮುಂದೆ ಬರುತ್ತಿದೆ. ಎಲ್ಲೆಡೆ ನೂತನ ಬ್ರಹ್ಮರಥಕ್ಕೆ ಅದ್ದೂರಿ ಸ್ವಾಗತ ನೀಡಲಾಗುತ್ತಿದೆ. ಭಕ್ತಾದಿಗಳು ಮೆರವಣಿಗೆ ಮೂಲಕ ನೂತನ ರಥಕ್ಕೆ ಸ್ವಾಗತ ಕೋರಿ ಸ್ವಾಗತಿಸುತ್ತಿದ್ದಾರೆ. ನೂತನ ರಥವು ಉಪ್ಪಿನಂಗಡಿ – ಕಡಬ ಮಾರ್ಗವಾಗಿ ಆಗಮಿಸಿ ಅ.2 ರಂದು ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ನೂತನ ಬ್ರಹ್ಮರಥ ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ. ಅದ್ದೂರಿಯಿಂದ ಸ್ವಾಗತಿಸಲು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಕುಮಾರಧಾರಾ ನದಿ ಬಳಿಯಿಂದ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಕುಮಾರಧಾರಾ ಬಳಿಯಿಂದ ರಸ್ತೆ ದುರಸ್ತಿ ಕಾರ್ಯ, ತೇಪೆ ಕಾರ್ಯ ನಡೆದಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…