ಸುಳ್ಯ/ಬಂಟ್ವಾಳ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಇದೀಗ ಬಿಸಿ ರೋಡ್ ದಾಟಿ ಮುಂದೆ ಬರುತ್ತಿದೆ. ಎಲ್ಲೆಡೆ ನೂತನ ಬ್ರಹ್ಮರಥಕ್ಕೆ ಅದ್ದೂರಿ ಸ್ವಾಗತ ನೀಡಲಾಗುತ್ತಿದೆ. ಭಕ್ತಾದಿಗಳು ಮೆರವಣಿಗೆ ಮೂಲಕ ನೂತನ ರಥಕ್ಕೆ ಸ್ವಾಗತ ಕೋರಿ ಸ್ವಾಗತಿಸುತ್ತಿದ್ದಾರೆ. ನೂತನ ರಥವು ಉಪ್ಪಿನಂಗಡಿ – ಕಡಬ ಮಾರ್ಗವಾಗಿ ಆಗಮಿಸಿ ಅ.2 ರಂದು ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ನೂತನ ಬ್ರಹ್ಮರಥ ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ. ಅದ್ದೂರಿಯಿಂದ ಸ್ವಾಗತಿಸಲು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಕುಮಾರಧಾರಾ ನದಿ ಬಳಿಯಿಂದ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಕುಮಾರಧಾರಾ ಬಳಿಯಿಂದ ರಸ್ತೆ ದುರಸ್ತಿ ಕಾರ್ಯ, ತೇಪೆ ಕಾರ್ಯ ನಡೆದಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…