Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಸೇವೆ : ಚರ್ಚೆಗೆ ಕಾರಣವಾದ ವಿಹಿಂಪ ನಡೆ

Share

ಸುಬ್ರಹ್ಮಣ್ಯ: ಕಳೆದ ಕೆಲವು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಸರ್ಪ ಸಂಸ್ಕಾರ ಸೇವೆಯ ವಿವಾದವು ಈಗ ಮತ್ತೆ ಚರ್ಚೆಯಾಗುತ್ತಿದ್ದಂತೆಯೇ ವಿಶ್ವ ಹಿಂದೂ ಪರಿಷದ್ ನೀಡಿರುವ ಹೇಳಿಕೆಯೇ ಈಗ ಚರ್ಚೆಗೆ ಕಾರಣವಾಗಿದೆ. ತಿಳಿಹೇಳಬೇಕಾದ ವಿಶ್ವ ಹಿಂದೂ ಪರಿಷದ್ ವಾಸ್ತವವನ್ನು ಅರಿತು ಸಮಸ್ಯೆ ಬಗೆಹರಿಸಬೇಕು ಎಂಬುದು ಸಾರ್ವಜನಿಕರ ಆಶಯ.

Advertisement
Advertisement

ಕಳೆದ ಕೆಲವು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆಯ ಬಗ್ಗೆ ಚರ್ಚೆ ಇದೆ. ಸಾವಿರಾರು ವರ್ಷಗಳ ಇತಿಹಾಸ ಇರುವ ನಾಗಾರಾಧನೆಗೇ ಪ್ರಮುಖ ಹೆಸರುವಾಸಿಯಾಗಿರುವ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ. ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಆಗಮಿಸಿ ಪೂಜೆ ಸಲ್ಲಿಸಿದ ಬಳಿಕ ಈ ಸೇವೆ ದೇಶಮಟ್ಟದಲ್ಲಿ ತಿಳಿಯಿತು. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯದ ದೇವರೂ ಸುಬ್ರಹ್ಮಣ್ಯನೇ ಆಗಿರುವುದರಿಂದ ಇಂದು ಚರ್ಚೆಗೆ ಪ್ರಮುಖ ಕಾರಣ. ವಿಶ್ವ ಹಿಂದೂ ಪರಿಷದ್ ಕಳೆದ ಅಷ್ಟೂ ವರ್ಷಗಳಿಂದ ಈ ಸೇವೆಯ ಬಗ್ಗೆ ಮಾತನಾಡಿರಲಿಲ್ಲ. ಈ ಹಿಂದೆ ಸಂಘ ಪರಿವಾರದ ಆಡಳಿತ ಇದ್ದ ಸಂದರ್ಭದಲ್ಲೂ ಇಂತಹದ್ದೇ ವಿವಾದಗಳು ನಡೆದಿತ್ತು. ಮೊದಲ ಬಾರಿಗೆ ಕುಮಾರಧಾರಾ ನದಿಯ ಬಳಿ ಸರ್ಪ ಸಂಸ್ಕಾರ ಸೇವೆ ನಡೆಯುತ್ತಿದ್ದಾಗ ಸಂಘ ಪರಿವಾರದ ಆಡಳಿತ ಇದ್ದ ಸಂದರ್ಭದಲ್ಲೇ ಆಡಳಿತವು ಕುಕ್ಕೆ ದೇವಸ್ಥಾನದಲ್ಲಿಯೇ ಸರ್ಪ ಸಂಸ್ಕಾರ ಆಗಬೇಕು , ಇದೊಂದು ಸೇವೆ ಇತರ ಕಡೆಗಳಲ್ಲಿ ಮಾಡಿದರೆ ಸುಬ್ರಹ್ಮಣ್ಯ ದೇವರಿಗೆ ಸಲ್ಲುವುದಿಲ್ಲ, ಇದು ಭಕ್ತರಿಗೆ ತಿಳಿಯುವುದಿಲ್ಲ, ಹೀಗಾಗಿ ಇದು ಧಾರ್ಮಿಕ ಶೋಷಣೆಯಾಗುತ್ತದೆ ಎಂದು ಹೇಳಿತ್ತು. ಹೀಗಾಗಿ ಕುಮಾರಧಾರಾ ನದಿ ಪಕ್ಕದಲ್ಲಿ ಯಾವುದೇ ಪೂಜೆ ಮಾಡಬಾರದು ಎಂದು ಸೂಚನೆಯನ್ನೂ ನೀಡಿತ್ತು. ಅದಾದ ಬಳಿಕ ಪಕ್ಕದ ಮಠದಲ್ಲಿ ಸರ್ಪ ಸಂಸ್ಕಾರ ಸೇವೆ ನಡೆಯುತ್ತಿದ್ದಾಗಲೂ ಅದೇ ಆಡಳಿತವು ಅಸಮಾಧಾನ ವ್ಯಕ್ತಪಡಿಸಿತ್ತು. ಇದೇ ಕಾರಣದಿಂದ ದೇವಸ್ಥಾನ ಹಾಗೂ ವೈಮನಸ್ಸು ಅಂದೇ ಆರಂಭವಾಗಿತ್ತು. ಆದರೆ ಅದನ್ನು ಬಗೆಹರಿಸುವಲ್ಲಿ ಸಂಘಪರಿವಾರ ಹಾಗೂ ವಿಶ್ವ ಹಿಂದೂ ಪರಿಷದ್ ಆಸಕ್ತಿ ವಹಿಸಿರಲಿಲ್ಲ.

ಈಗ ವಿಶ್ವ ಹಿಂದೂ ಪರಿಷದ್ ಇದೊಂದು ಧಾರ್ಮಿಕ ಸ್ವಾತಂತ್ರ್ಯ ಎಂದು ಹೇಳಿದೆ. ಹಾಗಿದ್ದರೆ ಅಂದು ಕುಮಾರಧಾರಾ ನದಿ ಪಕ್ಕದಲ್ಲಿ ನಡೆಸುತ್ತುದ್ದ ಪೂಜೆಯನ್ನು ಸಂಫಪರಿವಾರದ ಆಡಳಿತ ಇದ್ದಾಗ ನಿಲ್ಲಿಸಿದ್ದೇಕೆ ಹಾಗೂ ಸೂಚನೆ ನೀಡಿದ್ದೇಕೆ ಎಂದು ಈಗ ಚರ್ಚೆ ಆರಂಭವಾಗಿದೆ. ಅದೂ ಅಲ್ಲದೆ ಕಳೆದ ಬಾರಿ ಸಂಘಪರಿವಾರದ ಆಡಳಿತ ಇದ್ದ ಸಂದರ್ಭ ವ್ಯವಸ್ಥಾಪನಾ ಸಮಿತಿಯಲ್ಲಿದ್ದ ಸದಸ್ಯರೊಬ್ಬರು ನ್ಯಾಯದ ಪರವಾಗಿ ದೇವಸ್ಥಾನದ ಪರವಾಗಿ ಮಾತನಾಡಿದ್ದರು. ಅವರನ್ನೇ ಸಂಘಟನೆಯ ಜವಾಬ್ದಾರಿಯಿಂದ ಕೈಬಿಟ್ಟಿದೆ.

ಅದೂ ಅಲ್ಲದೆ ವಿಶ್ವಹಿಂದೂ ಪರಿಷದ್ ಸಂಘಪರಿವಾರದ ಅಂಗಸಂಸ್ಥೆ. ಹಿಂದೂಗಳ ನಂಬಿಕೆ, ಶ್ರದ್ಧೆಯ ಮೇಲೆ ಯಾವುದೇ ಧಕ್ಕೆಯಾದರೆ ಹಿಂದೂ ಆರಣೆಗಳಲ್ಲಿ ಲೋಪವಾಗದಂತೆ ಸಮಾಜವನ್ನೂ ಒಂದುಗೂಡಿಸುವ ಪಕ್ಷತೀತ , ಜಾತ್ಯಾತೀತವಾಗಿ ಕಾರ್ಯನಿರ್ವಹಿಸುವ ಸಂಘ ಪರಿವಾರದ ಸಂಸ್ಥೆ. ಆದರೆ ಕಳೆದ ಕೆಲವು ಸಮಯಗಳಿಂದ ಒಂದು ಸಂಸ್ಥೆಯ ಪರವಾಗಿಯೇ ಕೆಲಸ ಮಾಡುತ್ತಿರುವುದು ಮತ್ತಷ್ಟು ಚರ್ಚೆಯ ವಿಷಯವಾಗಿದೆ.

ಇತ್ತೀಚೆಗೆ ಸಂಘಪರಿವಾರ ವಿಶ್ವಹಿಂದೂ ಪರಿಷದ್ ಕೂಡಾ ಕೆಲವೊಂದು ವ್ಯಕ್ತಿಗಳ ಪರವಾಗಿ, ಕೆಲವೊಂದು ಮಠಗಳ ಪರವಾಗಿ ವಹಿಸಿ ಮಾತನಾಡುತ್ತಿರುವುದು ಸಂಘಟನೆಯ ಮೇಲಿನ ವಿಶ್ವಾಸಾರ್ಹತೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಸರ್ಪಸಂಸ್ಕಾರ ಸೇವೆಯ ವಿಚಾರದಲ್ಲಿ ಎರಡೂ ಸಂಸ್ಥೆಗಳ ಮೇಲಿರುವ ಭಿನ್ನಾಭಿಪ್ರಾಯ ತೊಲಗಿಸಿ ಧಾರ್ಮಿಕ ನಂಬಿಕೆಗೆ ಗೌರವ ತಂದುಕೊಡುವ ಕೆಲಸ ವಿಹಿಂಪ ಮಾಡಬೇಕಿದೆ. ದೇವಸ್ಥಾನ ಹಾಗೂ ಮಠಗಳು ವ್ಯಾಪಾರೀ ಕೇಂದ್ರವಾಗದಂತೆ ವಿಹಿಂಪ ತಿಳಿಹೇಳಬೇಕಿದೆ. ಸರ್ಪಸಂಸ್ಕಾರ ಎಂಬುದು ಒಂದು ಸೇವೆ. ಈ ಸೇವೆ ವ್ಯಾಪಾರೀಕರಣವಾಗದಂತೆ ಏನು ಮಾಡಬಹುದು ಎಂಬುದನ್ನು ವಿಹಿಂಪ ಯೋಚನೆ ಮಾಡಬೇಕಿದೆ. ಇಲ್ಲಿ ಆದಾಯ ಹಾಗೂ ಲಾಭ ನಷ್ಟದ ಬಗ್ಗೆ ಚರ್ಚೆ ನಡೆಯುತ್ತದೆಯಾದರೆ ಅದು ದೇವಸ್ಥಾನ, ನಂಬಿಕೆಯ ತಾಣವಾಗಿ ಉಳಿಯುವುದು ಹೇಗೆ ? ಸರ್ಪಸಂಸ್ಕಾರ ಎಂಬ ಸೇವೆ ಅತೀ ಕಡಿಮೆಯಲ್ಲಿ ಆಗುವಂತೆ ಏನು ಮಾಡಬಹುದು ಎಂಬುದರ ಬಗ್ಗೆ ವಿಹಿಂಪ ಸಲಹೆ ಕೊಡಬೇಕಿದೆ. ಅದೊಂದು ಹೆಚ್ಚು ಶುಲ್ಕ ನೀಡಿ ಮಾಡುವ ಸೇವೆಯಾದರೆ ಅದೊಂದು ಧಾರ್ಮಿಕ ಶೋಷಣೆ ಎಂಬುದಾಗುತ್ತದೆ ಎಂದು ಜನರು ಚರ್ಚೆ ಮಾಡುತ್ತಿದ್ದಾರೆ. ಹೀಗಾಗಿ ಏಕಪಕ್ಷೀಯವಲ್ಲದ ಚರ್ಚೆ ನಡೆಯಬೇಕು. ವಿಶ್ವ ಹಿಂದೂ ಪರಿಷದ್ ನಂತಹ ಸಂಸ್ಥೆ ಈ ಕಾರ್ಯ ಮಾಡಬೇಕು. ಸೇವೆಯನ್ನು ಉಚಿತವಾಗಿ ನೀಡುವಂತೆ ಪ್ರಯತ್ನ ಮಾಡಬೇಕು ಎಂಬುದು ಸಾರ್ವಜನಿಕರ ಆಶಯ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

19 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago