Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ : ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ

Share

ಸುಬ್ರಹ್ಮಣ್ಯ:  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸುಮಾರು 2.37 ಕೋ.ರೂ ಮಿಕ್ಕಿದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಗುರುವಾರ ನೆರವೇರಿಸಿತು.

ಆದಿಸುಬ್ರಹ್ಮಣ್ಯದಲ್ಲಿ 9.82 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಕಲ್ಯಾಣ ಮಂಟಪ, ಇಂಜಾಡಿಯಲ್ಲಿ43.04 ಲಕ್ಷ ರೂ ವೆಚ್ಚದಲ್ಲಿ ದೇವಸ್ಥಾನದ ಡಿ ಗ್ರೂಪ್ ನೌಕರರಿಗೆ ವಸತಿಗೃಹ, ದೇವಸ್ಥಾನದ ವತಿಯಿಂದ ಇಂಜಾಡಿ ಬಳಿ 58.06 ಲಕ್ಷ ರೂ ವೆಚ್ಚದಲ್ಲಿ ಆಧುನಿಕ ಮುಕ್ತಿಧಾಮ, ಅಗ್ರಹಾರ ಬಳಿ ನಕ್ಷತ್ರವನದಲ್ಲಿ 26.10 ಲಕ್ಷ ರೂ ವೆಚ್ಚದಲ್ಲಿ ನವೀಕೃತ ಗಾರ್ಡನ್, ಷಣ್ಮುಖ ಭೋಜನ ಶಾಲೆಗೆ11.98 ಲಕ್ಷ ರೂ ವೆಚ್ಚದಲ್ಲಿ ಡಿಸ್ ವಾಷಿಂಗ್ ಮೆಷಿನ್ ಅಳವಡಿಕೆ, ಆದಿಶೇಷ ವಸತಿಗೃಹದಲ್ಲಿ 13.54 ಲಕ್ಷ ರೂ ವೆಚ್ಚದಲ್ಲಿ ಲಿಪ್ಟ್ ವ್ಯವಸ್ಥೆ, ಆದಿಶೇಷ ವಸತಿಗೃ ಹಕ್ಕೆ 12.58 ಲಕ್ಷ ರೂ ವೆಚ್ಚದಲ್ಲಿ ಜನರೇಟರ್ ಅಳವಡಿಕೆ, ಆದಿಶೇಷ ಮುಂಭಾಗದ ನವೀಕೃತ ಗಾರ್ಡನ್ ಇವುಗಳ ಉದ್ಘಾಟನೆ ನೆರವೇರಿತು.
ಸ.ಪ ಪೂರ್ವ ಕಾಲೇಜು ಬಳಿ 20.68 ಲಕ್ಷ ರೂ ವೆಚ್ಚದಲ್ಲಿ ಬಾಲಕರ ಶೌಚಾಲಯ ನಿರ್ಮಾಣ, ಕೆಎಸ್‍ಆರ್‍ಟಿಸಿ ಬಳಿ ಸಾರ್ವಜನಿಕ ಶೌಚಾಲಯ, ಸವಾರಿಮಂಟಪ ಬಳಿ ಶೌಚಾಲಯ, ಅರಣ್ಯ ಇಲಾಖೆ ಹಿಂಬಾಗ ಶೌಚಾಲಯ ನಿರ್ಮಾಣ ಕಾಮಗಾರಿಗಳಿಗೆ ಇದೇ ವೇಳೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಶಂಕುಸ್ಥಾಪನೆ ನೆರವೇರಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮಾತನಾಡಿ, “ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಮೂಲ ಸೌಕರ್ಯ ಈಡೇರಿಕೆ ಜತೆಗೆ ಕ್ಷೇತ್ರಕ್ಕಾಗಮಿಸುವ ಭಕ್ತರ, ದೇವಸ್ಥಾನದ ನೌಕರರ, ವಿದ್ಯಾರ್ಥಿಗಳ ಹಿತಕಾಯಲು ದೇವಸ್ಥಾನದ ಆಡಳಿತ ಸಂಪೂರ್ಣ ಬದ್ಧವಿದೆ. ದೇವಸ್ಥಾನಕ್ಕೆ ಹೆಚ್ಚಿನ ಭಕ್ತರು ಆಗಮಿಸುತ್ತಿದ್ದು ಅವರ ಮೂಲಸೌಕರ್ಯ ಈಡೇರಿಸುವುದು ನಮ್ಮ ಕರ್ತವ್ಯ, ಜತೆಗೆ ಕ್ಷೇತ್ರದಲ್ಲಿ ಹಲವು ಮೂಲ ಸೌಕರ್ಯಗಳ ಕೊರತೆ ಇತ್ತು. ಡಿ. ಗ್ರೂಪ್ ನೌಕರರ ವಾಸ್ತವ್ಯಕ್ಕೆ ಕೊಠಡಿಗಳಿರಲಿಲ್ಲ. ಸಾಮಾನ್ಯ ವರ್ಗಕ್ಕೆ ಅನುಕೂಲವಾಗುವ ಕಲ್ಯಾಣ ಮಂಟಪ ನಿರ್ಮಾಣ ಇವೆಲ್ಲವನ್ನು ಪರಿಹರಿಸುವಲ್ಲಿ ನಮ್ಮ ಆಡಳಿತ ಆರಂಭದಿಂದಲೂ ಹೆಚ್ಚು ಮುತುವರ್ಜಿ ವಹಿಸಿ ಅಭಿವೃದ್ಧಿ ನಡೆಸುತ್ತ ಬಂದಿದೆ ಎಂದರು.

ದೇಗುಲದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಚ್, ಎಂ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಪೆರಾಲ್, ಸಮಿತಿ ಸದಸ್ಯರಾದ ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ಮಹೇಶ್ ಕುಮಾರ್ ಕರಿಕ್ಕಳ, ರಾಜೀವಿ ಆರ್ ರೈ, ರವೀಂದ್ರನಾಥ ಶೆಟ್ಟಿ, ಮಾಧವ ಡಿ. ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ವಿಮಲ ರಂಗಯ್ಯ, ದೇಗುಲದ ಬಾಲಸುಬ್ರಹ್ಮಣ್ಯ ಭಟ್, ಮಾಸ್ಟರ್ ಪ್ಲಾನ್ ಸಮಿತಿಯ ಕೆ.ಪಿ ಗಿರಿಧರ, ಶಿವರಾಮ ರೈ, ಲೋಲಾಕ್ಷ, ಗ್ರಾ.ಪಂ ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಪಿಡಿಒ ಮುತ್ತಪ್ಪ. ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ, ದೇಗುಲದ ಇಂಜಿನೀಯರ್ ಉದಯಕುಮಾರ್, ಪ್ರಾಂಶುಪಾಲೆ ಸಾವಿತ್ರಿ, ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್, ಮುಖ್ಯ ಶಿಕ್ಷಕ ಯಶವಂತ ರೈ, ಗ್ರಾ.ಪಂ ಸದಸ್ಯರಾದ ದಿನೇಶ್ ಬಿ.ಎನ್, ಮೋಹನದಾಸ್ ರೈ, ಸೌಮ್ಯ ಬಿ, ಭವಾನಿಶಂಕರ ಪೂಂಬಾಡಿ, ಪ್ರಶಾಂತ ಭಟ್ ಮಾಣಿಲ, ಪ್ರಮುಖರಾದ ಯಜ್ಞೇಶ್ ಆಚಾರ್, ರವಿಕಕ್ಕೆಪದವು, ಗೋಪಾಲ ಎಣ್ಣೆಮಜಲು, ಉಪನ್ಯಾಸಕ ಸೋಮಶೇಖರ, ಪ್ರಕಾಶ್ ಕುಂದಾಪುರ, ಸುಬ್ರಹ್ಮಣ್ಯ ರಾವ್, ಗುತ್ತಿಗೆದಾರರು ಮತ್ತಿತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

50 minutes ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

2 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

11 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

17 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

18 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

1 day ago