Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ : ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ

Share

ಸುಬ್ರಹ್ಮಣ್ಯ:  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸುಮಾರು 2.37 ಕೋ.ರೂ ಮಿಕ್ಕಿದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಗುರುವಾರ ನೆರವೇರಿಸಿತು.

ಆದಿಸುಬ್ರಹ್ಮಣ್ಯದಲ್ಲಿ 9.82 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಕಲ್ಯಾಣ ಮಂಟಪ, ಇಂಜಾಡಿಯಲ್ಲಿ43.04 ಲಕ್ಷ ರೂ ವೆಚ್ಚದಲ್ಲಿ ದೇವಸ್ಥಾನದ ಡಿ ಗ್ರೂಪ್ ನೌಕರರಿಗೆ ವಸತಿಗೃಹ, ದೇವಸ್ಥಾನದ ವತಿಯಿಂದ ಇಂಜಾಡಿ ಬಳಿ 58.06 ಲಕ್ಷ ರೂ ವೆಚ್ಚದಲ್ಲಿ ಆಧುನಿಕ ಮುಕ್ತಿಧಾಮ, ಅಗ್ರಹಾರ ಬಳಿ ನಕ್ಷತ್ರವನದಲ್ಲಿ 26.10 ಲಕ್ಷ ರೂ ವೆಚ್ಚದಲ್ಲಿ ನವೀಕೃತ ಗಾರ್ಡನ್, ಷಣ್ಮುಖ ಭೋಜನ ಶಾಲೆಗೆ11.98 ಲಕ್ಷ ರೂ ವೆಚ್ಚದಲ್ಲಿ ಡಿಸ್ ವಾಷಿಂಗ್ ಮೆಷಿನ್ ಅಳವಡಿಕೆ, ಆದಿಶೇಷ ವಸತಿಗೃಹದಲ್ಲಿ 13.54 ಲಕ್ಷ ರೂ ವೆಚ್ಚದಲ್ಲಿ ಲಿಪ್ಟ್ ವ್ಯವಸ್ಥೆ, ಆದಿಶೇಷ ವಸತಿಗೃ ಹಕ್ಕೆ 12.58 ಲಕ್ಷ ರೂ ವೆಚ್ಚದಲ್ಲಿ ಜನರೇಟರ್ ಅಳವಡಿಕೆ, ಆದಿಶೇಷ ಮುಂಭಾಗದ ನವೀಕೃತ ಗಾರ್ಡನ್ ಇವುಗಳ ಉದ್ಘಾಟನೆ ನೆರವೇರಿತು.
ಸ.ಪ ಪೂರ್ವ ಕಾಲೇಜು ಬಳಿ 20.68 ಲಕ್ಷ ರೂ ವೆಚ್ಚದಲ್ಲಿ ಬಾಲಕರ ಶೌಚಾಲಯ ನಿರ್ಮಾಣ, ಕೆಎಸ್‍ಆರ್‍ಟಿಸಿ ಬಳಿ ಸಾರ್ವಜನಿಕ ಶೌಚಾಲಯ, ಸವಾರಿಮಂಟಪ ಬಳಿ ಶೌಚಾಲಯ, ಅರಣ್ಯ ಇಲಾಖೆ ಹಿಂಬಾಗ ಶೌಚಾಲಯ ನಿರ್ಮಾಣ ಕಾಮಗಾರಿಗಳಿಗೆ ಇದೇ ವೇಳೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಶಂಕುಸ್ಥಾಪನೆ ನೆರವೇರಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮಾತನಾಡಿ, “ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಮೂಲ ಸೌಕರ್ಯ ಈಡೇರಿಕೆ ಜತೆಗೆ ಕ್ಷೇತ್ರಕ್ಕಾಗಮಿಸುವ ಭಕ್ತರ, ದೇವಸ್ಥಾನದ ನೌಕರರ, ವಿದ್ಯಾರ್ಥಿಗಳ ಹಿತಕಾಯಲು ದೇವಸ್ಥಾನದ ಆಡಳಿತ ಸಂಪೂರ್ಣ ಬದ್ಧವಿದೆ. ದೇವಸ್ಥಾನಕ್ಕೆ ಹೆಚ್ಚಿನ ಭಕ್ತರು ಆಗಮಿಸುತ್ತಿದ್ದು ಅವರ ಮೂಲಸೌಕರ್ಯ ಈಡೇರಿಸುವುದು ನಮ್ಮ ಕರ್ತವ್ಯ, ಜತೆಗೆ ಕ್ಷೇತ್ರದಲ್ಲಿ ಹಲವು ಮೂಲ ಸೌಕರ್ಯಗಳ ಕೊರತೆ ಇತ್ತು. ಡಿ. ಗ್ರೂಪ್ ನೌಕರರ ವಾಸ್ತವ್ಯಕ್ಕೆ ಕೊಠಡಿಗಳಿರಲಿಲ್ಲ. ಸಾಮಾನ್ಯ ವರ್ಗಕ್ಕೆ ಅನುಕೂಲವಾಗುವ ಕಲ್ಯಾಣ ಮಂಟಪ ನಿರ್ಮಾಣ ಇವೆಲ್ಲವನ್ನು ಪರಿಹರಿಸುವಲ್ಲಿ ನಮ್ಮ ಆಡಳಿತ ಆರಂಭದಿಂದಲೂ ಹೆಚ್ಚು ಮುತುವರ್ಜಿ ವಹಿಸಿ ಅಭಿವೃದ್ಧಿ ನಡೆಸುತ್ತ ಬಂದಿದೆ ಎಂದರು.

ದೇಗುಲದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಚ್, ಎಂ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಪೆರಾಲ್, ಸಮಿತಿ ಸದಸ್ಯರಾದ ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ಮಹೇಶ್ ಕುಮಾರ್ ಕರಿಕ್ಕಳ, ರಾಜೀವಿ ಆರ್ ರೈ, ರವೀಂದ್ರನಾಥ ಶೆಟ್ಟಿ, ಮಾಧವ ಡಿ. ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ವಿಮಲ ರಂಗಯ್ಯ, ದೇಗುಲದ ಬಾಲಸುಬ್ರಹ್ಮಣ್ಯ ಭಟ್, ಮಾಸ್ಟರ್ ಪ್ಲಾನ್ ಸಮಿತಿಯ ಕೆ.ಪಿ ಗಿರಿಧರ, ಶಿವರಾಮ ರೈ, ಲೋಲಾಕ್ಷ, ಗ್ರಾ.ಪಂ ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಪಿಡಿಒ ಮುತ್ತಪ್ಪ. ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ, ದೇಗುಲದ ಇಂಜಿನೀಯರ್ ಉದಯಕುಮಾರ್, ಪ್ರಾಂಶುಪಾಲೆ ಸಾವಿತ್ರಿ, ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್, ಮುಖ್ಯ ಶಿಕ್ಷಕ ಯಶವಂತ ರೈ, ಗ್ರಾ.ಪಂ ಸದಸ್ಯರಾದ ದಿನೇಶ್ ಬಿ.ಎನ್, ಮೋಹನದಾಸ್ ರೈ, ಸೌಮ್ಯ ಬಿ, ಭವಾನಿಶಂಕರ ಪೂಂಬಾಡಿ, ಪ್ರಶಾಂತ ಭಟ್ ಮಾಣಿಲ, ಪ್ರಮುಖರಾದ ಯಜ್ಞೇಶ್ ಆಚಾರ್, ರವಿಕಕ್ಕೆಪದವು, ಗೋಪಾಲ ಎಣ್ಣೆಮಜಲು, ಉಪನ್ಯಾಸಕ ಸೋಮಶೇಖರ, ಪ್ರಕಾಶ್ ಕುಂದಾಪುರ, ಸುಬ್ರಹ್ಮಣ್ಯ ರಾವ್, ಗುತ್ತಿಗೆದಾರರು ಮತ್ತಿತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

13 minutes ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

6 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

12 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

13 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

21 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

23 hours ago